ಬಂಗಾರಪೇಟೆ:- ಹುಸಿ ಭರವಸೆ ನೀಡುವುದು ಬಿಜೆಪಿಗೆ ಜಾಯಮಾನವಲ್ಲ ಎಂದು ಮುನಿಸ್ವಾಮಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಹುಸಿ ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬರುವುದು ಬಿಜೆಪಿಯ ಜಾಯಮಾನವಲ್ಲ ನೀಡಿದ ಭರವಸೆಗಳನ್ನು ಪೂರಕವಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸಿ, ಸಮಾಜದ ಕಟ್ಟಕಡೆಯ ವ್ಯಕ್ತಿಯ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಕೇಂದ್ರ ಸರ್ಕಾರ ನಿರಂತರವಾಗಿ ಮಾಡುತ್ತಾ ಬರುತ್ತಿದೆ ಎಂದು ಮುನಿಸ್ವಾಮಿ ಹೇಳಿದರು.
ನಾಗರಿಕರು ಅನಾರೋಗ್ಯಕ್ಕೆ ಈಡಾದಾಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಔಷಧಿಗಳನ್ನು ಖರೀದಿಸಲು ಔಷಧಿಗಳ ಮಳಿಗೆಗೆ ತೆರಳಿದಾಗ ಅಲ್ಲಿ ಔಷಧಿಗಳ ಬೆಲೆ ದುಬಾರಿಯಾಗಿರುತ್ತದೆ, ಬಡವರು ಔಷಧಿಗಳನ್ನು ಖರೀದಿಸಲಾಗದ ಪರಿಸ್ಥಿತಿಯನ್ನು ಕಂಡು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಔಷಧಿಗಳನ್ನು ರಿಯಾಯಿತಿ ದರದಲ್ಲಿ ಖರೀದಿಸಲು ಜನ ಔಷಧಿ ಕೇಂದ್ರಗಳನ್ನು ತೆರೆದಿದ್ದಾರೆ ನೀವು ಇದನ್ನು ಸದ್ಬಳಿಕೆ ಮಾಡಿಕೊಳ್ಳಬೇಕು ಎಂದರು, ಹಾಗೂ 31 ಕೋಟಿ ರು.ಗಳ ವೆಚ್ಚದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾರ್ಯ ಆರಂಭಿಸಲಾಗುವುದು, ಬಂಗಾರಪೇಟೆ ಪಟ್ಟಣದಲ್ಲಿ 70 ಕೋಟಿ ವೆಚ್ಚದಲ್ಲಿ ರೈಲ್ವೆ ನಿಲ್ದಾಣವನ್ನು ಅಭಿವೃದ್ಧಿ ಪಡಿಸಲಾಗುವುದು ಎಂದರು.