ಹುಬ್ಬಳ್ಳಿ: ಯಶ್ ಬರ್ತ್ ಡೇ ಹಿನ್ನೆಲೆಯಲ್ಲಿ ಬ್ಯಾನರ್ ಕಟ್ಟಲು ಹೋಗಿ ಲಕ್ಷ್ಮೇಶ್ವರ ತಾಲ್ಲೂಕಿನ ಸೂರಣಗಿ ಗ್ರಾಮದ ಮೂವರು ಸಾವನ್ನಪ್ಪಿದ್ದು, ಅಂತಿಮ ಸಂಸ್ಕಾರಕ್ಕೆ ಹಾಗೂ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ರಾಕಿಂಗ್ ಸ್ಟಾರ್ ಯಶ್ ಆಗಮಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದಾರೆ.ಹೌದು.. ಅಭಿಮಾನಿಗಳ ಹಾಗೂ ವಾಹನ ಈಗಾಗಲೇ ಯಶ್ ಬರುವಿಕೆಗಾಗಿ ಕಾಯುತ್ತಿದ್ದು, ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿ ಲಕ್ಷ್ಮೇಶ್ವರ ಮಾರ್ಗವಾಗಿ ಸೂರಣಗಿ ಗ್ರಾಮಕ್ಕೆ ತೆರಳಲಿದ್ದಾರೆ.