ಹುಬ್ಬಳ್ಳಿ:- ರಾಮಮಂದಿರ ನಿರ್ಮಾಣದ ಕ್ರೆಡಿಟ್ ಪಡೆಯಲು ಕಾಂಗ್ರೆಸ್ಸಿಗರ ಯತ್ನ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ರಾಮನ ಅಸ್ತಿತ್ವದ ಬಗ್ಗೆ ಪ್ರಶ್ನೆ ಮಾಡಿದ್ದ ಕಾಂಗ್ರೆಸ್ಸಿಗರು ಈಗ ರಾಮಮಂದಿರದ ಯಶಸ್ಸಿನ ಪಾಲು ಪಡೆಯಲು ಪ್ರಯತ್ನಿಸುತ್ತಿದ್ದಾರೆ’ ಎಂದರು.
ರಾಮ ಕಾಲ್ಪನಿಕ. ರಾಮಾಯಣ ನಡೆದಿದೆ ಎನ್ನುವುದಕ್ಕೆ ಪುರಾವೆಗಳಿಲ್ಲ. ಶ್ರೀರಾಮ ಜನ್ಮ ಭೂಮಿ ಕುರಿತು ನಿರ್ಣಯ ಕೈಗೊಳ್ಳಬಾರದೆಂದು ಕಾಂಗ್ರೆಸ್ಸಿಗರು ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಈಗ ಎಲ್ಲವೂ ಬಗೆಹರಿದು, ರಾಮಮಂದಿರ ನಿರ್ಮಾಣವಾಗಿದೆ. ಇದರ ಕ್ರೆಡಿಟ್ ಪಡೆಯಲು ಕಾಂಗ್ರೆಸ್ಸಿಗರು ಹೊರಟಿದ್ದಾರೆ. ಜನರ ದಾರಿ ತಪ್ಪಿಸಲು ಹೊರಟಿದ್ದಾರೆ. ಜನರು ಬುದ್ಧಿವಂತರಿದ್ದು, ಎಲ್ಲವೂ ಗೊತ್ತಾಗುತ್ತದೆ’ ಎಂದು ಹೇಳಿದರು.
‘ಅನ್ನಭಾಗ್ಯ ಯೋಜನೆಯಡಿ ನೀಡುತ್ತಿರುವ ಅಕ್ಕಿ ಸಂಪೂರ್ಣವಾಗಿ ಕೇಂದ್ರ ಸರ್ಕಾರದ್ದು. ರಾಜ್ಯದ ಕಾಂಗ್ರೆಸ್ ಸರ್ಕಾರ ಇದುವರೆಗೆ ಒಂದು ಕಾಳು ಅಕ್ಕಿ ಕೊಟ್ಟಿಲ್ಲ. ಚುನಾವಣೆ ವೇಳೆ 10 ಕೆ.ಜಿ. ಅಕ್ಕಿ ಕೊಡುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದರು. ಆದರೆ, ಇದುವರೆಗೆ ಕೊಟ್ಟಿಲ್ಲ’ ಎಂದು ಟೀಕಿಸಿದರು.