ಬಳ್ಳಾರಿ: ನಗರದ ಗುಗ್ಗರಹಟ್ಟಿ ಬಳಿಯ ಭಾರತ್ ಬಿಸ್ಕೆಟ್ ಪ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಪೋಟಗೊಂಡು, ಓರ್ವ ಸಾವನ್ನಪ್ಪಿದ್ದು ಆರು ಜನರು ಗಾಯಗೊಂಡಿರುವ ಘಟನೆ ಇಂದು ಸಂಜೆ ಸಂಭವಿಸಿದೆ.
ಬಾಯ್ಲರ್ ಸ್ಫೋಟದಲ್ಲಿ ಸಲೀಂ ಎನ್ನುವ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೋರ್ವನ ಸ್ಥಿತಿ ಚಿಂತಾಜನಕವಾಗಿದೆ. ಐವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ನಗರದ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಾಯ್ಲರ್ ಸ್ಟೋಟಕ್ಕೆ ನಿಖರ ಕಾರಣ ಏನೆಂಬುದು ತಿಳಿದು ಬಂದಿಲ್ಲ.
ಸ್ಥಳಕ್ಕೆ ಬಳ್ಳಾರಿ ಗ್ರಾಮೀಣ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿಸುತಿದ್ದಾರೆ.