ಬೆಂಗಳೂರಿನಿಂದ ನೆಲಮಂಗಲ ಕಡೆ ಹೋಗುವವರು ಈ ಸ್ಟೋರಿ ಮಿಸ್ ಮಾಡದೆ ನೋಡಿದೆ. ಯಾಕೆಂದರೆ ಬರೋಬ್ಬರಿ 18 ಜಿಲ್ಲೆಗೆ ಸಂಪರ್ಕಿಸೋ ಪೀಣ್ಯ ಫ್ಲೈ ಓವರ್ ಮತ್ತೆ ಬಂದ್ ಆಗಲಿದೆ. ಈ ಬಾರಿ ಮೂರು ದಿನಗಳ ಕಾಲ ಸಂಚಾರಕ್ಕೆ ನಿರ್ಬಂಧ ಇರಲಿದೆ. ಮೊದಲೇ ಸಂಚಾರ ದಟ್ಟಣೆ ಮಧ್ಯೆ ಇದು ಪ್ರಯಾಣಿಕರು, ವಾಹನ ಸವಾರರಿಗೆ ಮತ್ತಷ್ಟು ಕಿರಿಕಿರಿ ಎದುರಾಗಲಿದೆ.
ಬೆಂಗಳೂರು ನಗರದಿಂದ ಬರೋಬ್ಬರಿ 18 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಪೀಣ್ಯ ಫ್ಲೈಓವರ್. ಇಂದು ರಾತ್ರಿಯಿಂದ ಮೂರು ದಿನಗಳ ಕಾಲ ಬಂದ್ ಆಗಿರಲಿದೆ. ಇಂದು ರಾತ್ರಿ 11 ಗಂಟೆಯಿಂದ ಜನವರಿ 19ರ ರ ಬೆಳಗ್ಗೆ 11 ಗಂಟೆವರೆಗೆ ಸಂಪೂರ್ಣ ವಾಹನಗಳ ಸಂಚಾರಕ್ಕೆ ಬ್ರೇಕ್ ಬೀಳಲಿದೆ. ರಾಷ್ಟ್ರೀಯ ಹೆದ್ದಾರಿ-೪ ರ ಪೀಣ್ಯ ಎಲಿವೇಟೆಡ್ ಹೈವೇಗೆ ಅಳವಡಿಸಿದ್ದ ವಯಾಡಕ್ಟ್ ದುರಸ್ಥಿ ಹಿನ್ನೆಲೆ ಲೋಡ್ ಟೆಸ್ಟಿಂಗ್ ನಡೆಸಲಿರುವ ಕಾರಣ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ತುಮಕೂರು ರಸ್ತೆಯ ಗೊರಗುಂಟೆಪಾಳ್ಯದಿಂದ ನಾಗಸಂದ್ರದ ಪಾರ್ಲೆ ಜಿ ಫ್ಯಾಕ್ಟರಿವರೆಗೂ 5 ಕಿಮೀ ಉದ್ದವಿರುವ ಪೀಣ್ಯ ಮೇಲ್ಸೇತುವೆಯ ವಯಾಡಕ್ಟ್ನ ಸಮಗ್ರತೆ ಹಾಗೂ ಲೋಡ್ ಟೆಸ್ಟಿಂಗ್ ಪರಿಶೀಲನೆ ಕಾರಣಕ್ಕೆ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ಈ ಹಿಂದೆ ದುರಸ್ಥಿ ಸಂಬಂಧ ಐಐಎಸ್ಸಿ ತನಿಖೆ ಮಾಡಿ ರಾಷ್ಟ್ರೀಯ ಹೆದ್ದಾರಿಗೆ ಫ್ಲೈಓವರ್ ನಲ್ಲಿ ಲೋಪ ಇರುವ ಸಂಬಂಧ ರಿಪೋರ್ಟ್ ನೀಡಿದ್ದು. ಈ ಕಾರಣ ಸಮಸ್ಯೆ ಇದ್ದ ಸ್ಥಳದಲ್ಲಿ ಕೇಬಲ್ ಗಳ ಬದಲಾವಣೆ ಮಾಡಿದ್ದು, ಸದ್ಯ ಆ ಭಾಗಗಳಲ್ಲಿ ಲೋಡ್ ಟೆಸ್ಟಿಂಗ್ ಮಾಡಬೇಕಿರುವ ಕಾರಣ ಸದ್ಯ ಫ್ಲೈ ಓವರ್ ಬಂದ್ ಮಾಡಿ ಟೆಸ್ಟಿಂಗ್ ಗೆ ಎನ್ಎಚ್ಎಐ ಮುಂದಾಗಿದೆ. ಈ ಭಾಗದ ವಾಹನ ಸವಾರರಿಗೆ ಟ್ರಾಫಿಕ್ ಬಿಸಿ ತಟ್ಟಲಿದೆ.
ಇನ್ನೂ ಸೇತುವೆ ಸಂಚಾರ ಬಂದ್ ಆಗಿರೋ ಕಾರಣ ಸದ್ಯ ಸಂಚರಿಸಬೇಕಿರೋ ವಾಹನ ಸವಾರರ ಪರ್ಯಾಯ ಮಾರ್ಗ ಅನುಸರಿಸಬೇಕಿದೆ. ನೆಲಮಂಗಲ ಕಡೆಯಿಂದ ಬೆಂಗಳೂರು ನಗರಕ್ಕೆ ಫ್ಲೈ ಓವರ್ ರಸ್ತೆಯ ಮೂಲಕ ಸಾಗುವ ವಾಹನಗಳು ಕೆನ್ನಮೆಟಲ್ ವಿಡಿಯಾ ಹತ್ತಿರ ಫ್ಲೈಓವರ್ ಪಕ್ಕದ ಎನ್ಹೆಚ್-೪ ಮತ್ತು ಸರ್ವೀಸ್ ರಸ್ತೆಯ ಮೂಲಕ ೮ನೇ ಮೈಲಿ-ದಾಸರಹಳ್ಳಿ, ಜಾಲಹಳ್ಳಿ ಕ್ರಾಸ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್-ಎಸ್ ಆರ್ ಎಸ್ ಜಂಕ್ಷನ್ ಮೂಲಕ ಗೊರಗುಂಟೆಪಾಳ್ಯ ತಲುಪಬಹುದಾಗಿದೆ. ಇನ್ನೂ ಸಿಎಂಟಿಐ ಜಂಕ್ಷನ್ನಿಂದ ನೆಲಮಂಗಲ ಕಡೆಗೆ ಫ್ಲೈ ಓವರ್ ರಸ್ತೆಯಲ್ಲಿ ಸಾಗುವ ವಾಹನಗಳು ಪಾರ್ಲೆ-ಜಿ ಟೋಲ್ ತಲುಪಲು ಫ್ಲೈ ಓವರ್ ಪಕ್ಕದ ಎನ್ ಹೆಚ್-೪ ಮತ್ತು ಸರ್ವೀಸ್ ರಸ್ತೆಯಲ್ಲಿ ಎಸ್ಆರ್ಎಸ್ ಜಂಕ್ಷನ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್-ಜಾಲಹಳ್ಳಿ ಕ್ರಾಸ್, ದಾಸರಹಳ್ಳಿ- ೮ ನೇ ಮೈಲಿ ಮುಖಾಂತರ ಸಂಚರಿಸಲು ಅನುವು ಮಾಡಿಕೊಡಲಾಗಿದೆ.
.
ಒಟ್ಟಾರೆ ಪದೇ ಪದೇ ಸಮಸ್ಯೆ ಕಾಣಿಸಿಕೊಳ್ಳುತ್ತಿರೋ ಪೀಣ್ಯ ಫ್ಲೈಓವರ್ ನಲ್ಲಿ ಪರಿಶೀಲನೆ ಬಳಿಕ ವರದಿ ಏನಿರಲಿದೆ ಎಂಬ ಕುತೂಹಲವಿದೆ.