ಕಲಬುರಗಿ : ಬಿಜೆಪಿಯನ್ನ ಮತ್ತಷ್ಟು ಬಲಪಡಿಸಲು ನಿರ್ಧರಿಸಿರುವ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಇದೀಗ ಕಲಬುರಗಿಯ ಜಿಲ್ಲಾ ಘಟಕಕ್ಕೆ ಜೋಡೆತ್ತುಗಳನ್ನ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ನಗರ ಘಟಕಕ್ಕೆ ಚಂದು ಪಾಟೀಲ್ ಹಾಗು ಗ್ರಾಮಾಂತರ ಘಟಕಕ್ಕೆ ಶಿವರಾಜ್ ಪಾಟೀಲ್ ರದ್ದೇವಾಡಗಿ ನೇಮಕವಾಗಿದ್ದಾರೆ..ಈಗಾಗಲೇ ರದ್ದೇವಾಡಗಿ ಒಂದು ಬಾರಿ ಅಧ್ಯಕ್ಷರಾಗಿ ಇದೀಗ ಎರಡನೇ ಬಾರಿಗೂ ಆಯ್ಕೆಯಾಗಿ ಜಾಕ್ ಪಾಟ್ ಹೊಡೆದಿದ್ದಾರೆ.
ಇಬ್ಬರೂ ಮುಖಂಡರು ಒಟ್ಟಾಗಿ ಕಾರ್ಯಕರ್ತರ ಜೊತೆ ಶ್ರಮಿಸಿ ಲೋಕ ಸಮರ ಗೆಲ್ಲಲು ಮುಂದಾಗಿ ಅಂತ ಬಿವೈವಿ ಕಿವಿಮಾತು ಹೇಳಿದ್ದಾರೆ…