ಬಳ್ಳಾರಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಟ್ಟಡ ಕಾರ್ಮಿಕರಿಂದ ಬಳ್ಳಾರಿಯ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರೋಟೆಸ್ಟ್ ಮಾಡಲಾಯಿತು. ಅಖಿಲ ಕರ್ನಾಟಕ ಕಟ್ಟಡ ಮತ್ತು ಇತರೆ ಕಾರ್ಮಿಕರ ಸಂಘದಿಂದ ಪ್ರತಿಭಟನೆ ನಡೆಸಲಾಗಿದ್ದು, ನಗರದ ನಾರಾಯಣರಾವ್ ಪಾರ್ಕ್’ನಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ಕಟ್ಟಡ ಕಾರ್ಮಿಕರು ನಡೆಸಿದರು. ತಮ್ಮ ನ್ಯಾಯಯುತ ಬೇಡಿಕೆ ಈಡೇಸುವಂತೆ ಡಿಸಿ ಮೂಲಕ ಸರ್ಕಾರಕ್ಕೆ ಮನವಿ ಮಾಡಿದರು.
ಕಟ್ಟಡ ಕಾರ್ಮಿಕರ ಮಕ್ಕಳ ಮದುವೆ ಸಹಾಯಧನವನ್ನು 1 ಲಕ್ಷದವರೆಗೆ ಹೆಚ್ಚಿಸಬೇಕು, ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯ ದುರ್ಬಳಕೆ ನಿಲ್ಲಿಸಬೇಕು, ಎಲ್ಲಾ ಕಾರ್ಮಿಕರ ವೇತನವನ್ನು 26 ಸಾವಿರಕ್ಕೆ ಏರಿಸಬೇಕು ಮತ್ತು ಪಿಂಚಣಿ 10 ಸಾವಿರ ನೀಡಬೇಕು, ರಾಜ್ಯದ ಎಲ್ಲಾ ಕಾರ್ಮಿಕ ನೊಂದಾಯಿತ ಸಂಘಗಳಿಗೆ ಸೂಕ್ತ ಮಾನ್ಯತೆ ನೀಡಬೇಕು, ನಕಲಿ ಕಾರ್ಡುಗಳ ಹಾವಳಿ ತಡೆಗಟ್ಟಬೇಕು, ಬಾಕಿ ಇರುವ 2021 ನೇ ಸಾಲಿನ ಶೈಕ್ಷಣಿಕ ಅರ್ಜಿಯನ್ನು ಪರಿಶಿಲಿಸಿ ಕೂಡಲೇ ಹಣ ವರ್ಗಾವಣೆ ಮಾಡಬೇಕು, ಮನೆ ನಿರ್ಮಾಣಕ್ಕೆ 5ಲಕ್ಷ ಧನ ಸಹಾಯ ನೀಡಬೇಕು ಎಂದು ಒತ್ತಾಯ ಮಾಡಿದರು.