ರಾಮಮಂದಿರ (Ram Mandir) ಉದ್ಘಾಟನೆಗೆ ದಿನಗಣನೆ ಶುರುವಾಗಿದ್ದು, ಪ್ರಾಣಪ್ರತಿಷ್ಠೆಗೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಈ ಹೊತ್ತಲ್ಲೇ ಉತ್ತರ ಪ್ರದೇಶದ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ರಾಮಮಂದಿರ ಉದ್ಘಾಟನೆ ಹಿನ್ನೆಲೆ ಜನವರಿ 22ರಂದು ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ (Educational Institution) ರಜೆ (Holiday) ಘೋಷಿಸಿದ್ದಾರೆ.
ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸುವುದರ ಜೊತೆಗೆ, ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ದಿನದಂದು ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಜನವರಿ 22ರಂದು ಎಲ್ಲಾ ಸರ್ಕಾರಿ ಕಟ್ಟಡಗಳನ್ನು ಅಲಂಕರಿಸಲು ಮತ್ತು ಪಟಾಕಿಗಳ ವ್ಯವಸ್ಥೆಯನ್ನು ಮಾಡಲು ಆದಿತ್ಯನಾಥ್ ಕರೆ ನೀಡಿದ್ದಾರೆ
ಗೋವಾದಲ್ಲೂ ರಜೆ
ಗೋವಾದಲ್ಲೂ ಕೂಡ ಸಾರ್ವಜನಿಕ ರಜೆ ಘೋಷಣೆ ಮಾಡಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಆದೇಶ ನೀಡಿದ್ದಾರೆ. ಜನವರಿ 22 ರಂದು ರಾಜ್ಯದಲ್ಲಿ ಸಂಭ್ರಮ ಮೇಳೈಸಬೇಕು. ಹೀಗಾಗಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ ಕಚೇರಿಗಳಲ್ಲೂ ಯಾವುದೇ ಕೆಲಸ ಮಾಡುವುದು ಬೇಡ. ದೀಪಾವಳಿಯಂತೆ ಆ ದಿನವನ್ನು ಆಚರಿಸಿ ಎಂದು ಸಾವಂತ್ ಹೇಳಿದ್ದಾರೆ.
ಮಧ್ಯ ಪ್ರದೇಶ
ಮಧ್ಯ ಪ್ರದೇಶದಲ್ಲೂ ರಜೆ ಘೋಷಣೆ ಮಾಡಿ ಮೋಹನ್ ಯಾದವ್ ಆದೇಶ ನೀಡಿದ್ದಾರೆ. ರಾಜ್ಯಾದ್ಯಂತ ರಾಮ ಪ್ರಾಣ ಪ್ರತಿಷ್ಠಾಪನೆ ದಿನವನ್ನು ಆಚರಣೆ ಮಾಡಬೇಕು. ಜನವರಿ 22 ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ಮದ್ಯ, ಮಾಂಸದಂಗಡಿಗಳು ಬಂದ್ ಆಗಬೇಕು ಎಂದು ತಿಳಿಸಿದ್ದಾರೆ. ಛತ್ತೀಸ್ಗಢದಲ್ಲೂ ರಜೆ ಘೋಷಣೆ ಮಾಡಿ ಅಲ್ಲಿನ ಸರ್ಕಾರ ಆದೇಶ ಹೊರಡಿಸಿದೆ. ಹಾಗೆಯೇ ಹರಿಯಾಣದಲ್ಲೂ ಜನವರಿ 22 ರಂದು ರಜೆ ಘೋಷಣೆ ಮಾಡಲಾಗಿದೆ. ಇನ್ನು ಕರ್ನಾಟಕದಲ್ಲಿ ರಜೆ ಘೋಷಣೆ ಮಾಡಿಲ್ಲ.