ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಂದಿಸಿದ ಆರೋಪದ ಹಿನ್ನೆಲೆ ನಮೋ ಬಿಗ್ರೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲಾಗಿದೆ.
ಕಲಬುರಗಿ ಕಮೀಷನರ್ ಆರ್.ಚೇತನ್ ಅವರಿಗೆ ಕಲಬುರಗಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ್ ದೂರು ನೀಡಿದ್ದಾರೆ. ಖರ್ಗೆ ಅವರನ್ನ ಚಕ್ರವರ್ತಿ ಸೂಲಿಬೆಲೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಹೀಗಾಗಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ.
ರಾಯಚೂರಿನಲ್ಲಿ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಖರ್ಗೆ ಬಗ್ಗೆ ಸೂಲಿಬೆಲೆ ಅವಹೇಳನಕಾರಿಯಾಗಿ ನಿಂದಿಸಿದ್ದರು. ಈ ಹಿನ್ನೆಲೆ ಕಲಬುರಗಿ ಜಿಲ್ಲಾಧ್ಯಕ್ಷ ಜಗದೇವ್ ಗುತ್ತೇದಾರ್ ದೂರು ದಾಖಲಿಸಿದ್ದಾರೆ.