ತುಮಕೂರು: ಇಂದು ಶಿವಕುಮಾರ್ ಶ್ರೀಗಳ ಐದನೇ ಪುಣ್ಯ ಸ್ಮರಣೆ ಹಿನ್ನೆಲೆ ತುಮಕೂರಿನ ಕ್ಯಾತ್ಸಂದ್ರ ಬಳಿಯಿರುವ ಸಿದ್ದಗಂಗಾ ಮಠದಲ್ಲಿ ಶಿವಕುಮಾರ್ ಶ್ರೀ ಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿಲಾಯಿತು.
ರುದ್ರಾಭಿಷೇಕ,ಮಹಮಂಗಳಾರತಿ ಸೇರಿದಂತೆ ವಿಶೇಷ ಪೂಜೆ ಮಾಡಲಾಗಿದ್ದು, ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಸಿದ್ದಲಿಂಗ ಶ್ರೀ, ವಿವಿಧ ಮಠಾಧಿಶರು ಪೂಜೆಯಲ್ಲಿ ಭಾಗಿಯಾಗಿದ್ದರು.