ಚಿಕ್ಕೋಡಿ:- ನನ್ನ ವಿರುದ್ಧದ ಎಲ್ಲಾ ಆರೋಪ ಡಿಕೆಶಿ ಷಡ್ಯಂತ್ರದಿಂದಲೇ ಆಗಿದೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ನನ್ನನ್ನು ಹಿಮ್ಮೆಟ್ಟಿಸಲು ಡಿಕೆಶಿ ಅಪ್ಪ ಬಂದ್ರೂ ನಾನು ಬಿಡುವುದಿಲ್ಲ. ಸಿಡಿ ಪ್ರಕರಣದಲ್ಲಿ ಡಿ.ಕೆ ಶಿವಕುಮಾರ್ ನನಗೆ ಶಿಕ್ಷೆ ವಿಧಿಸಲು ಪ್ಲ್ಯಾನ್ ಮಾಡಿದ್ದ. ಆದರೆ ಅದು ಸಾಧ್ಯವಾಗಲಿಲ್ಲ. ಈಗ ಬ್ಯಾಂಕ್ಗೆ ವಂಚನೆ ಹೆಸರಿನಲ್ಲಿ 420 ಕೇಸ್ ದಾಖಲಿಸಿದ್ದಾನೆ. ನನ್ನ ಹೆಸರು ಟಿವಿಯಲ್ಲಿ ಬರೋದನ್ನು ನೋಡಿ ಸಮಾಧಾನ ಮಾಡಿಕೊಳ್ಳುತ್ತಿದ್ದಾನೆ ಎಂದರು.
ರಾಮಮಂದಿರದ ಉದ್ಘಾಟನೆ ವಿಚಾರದಲ್ಲಿ ಕಾಂಗ್ರೆಸ್ನವರು ಈ ರೀತಿ ಮಾಡುತ್ತಿರುವುದು ಏಕೆ ಎಂದು ತಿಳಿಯುತ್ತಿಲ್ಲ. ಮುಸ್ಲಿಂ ಸಮುದಾಯದ ಮತ ಓಲೈಕೆಗಾಗಿ ಕಾಂಗ್ರೆಸ್ ಈ ರೀತಿ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಯಾರು ಸಲಹೆ ನೀಡುತ್ತಾರೆ ಎಂಬುದು ಗೊತ್ತಾಗುತ್ತಿಲ್ಲ. ರಾಮಮಂದಿರ ಉದ್ಘಾಟನೆಗೆ ದೇಶವೇ ಕಾತುರದಿಂದ ಕಾದಿದೆ ಎಂದಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರನ್ನು ಫ್ರೀ ಹ್ಯಾಂಡ್ ಕೆಲಸ ಮಾಡಲು ಅಲ್ಲಿಯವರು ಬಿಡುತ್ತಿಲ್ಲ. ಅವರ ಮೇಲೆ ಒತ್ತಡ ತರುವ ಕೆಲಸವನ್ನು ಮಾಡುತ್ತಿದ್ದಾರೆ. ಡಿ.ಕೆ ಶಿವಕುಮಾರ್ ಹೈಕಮಾಂಡ್ ಮೇಲೆ ಒತ್ತಡ ತಂದು ಸಿಎಂ ಶಕ್ತಿ ಕುಂದಿಸುವ ಕೆಲಸ ಮಾಡುತ್ತಿದ್ದಾನೆ ಎಂದು ಆರೋಪಿಸಿದ್ದಾರೆ.