ಖ್ಯಾತ ಗಾಯಕ, ಸಂಗೀತ ಸಂಯೋಜಕ ಶಂಕರ್ ಮಹಾದೇವನ್ (Shankar Mahadevan) ಅವರು ಅಯೋಧ್ಯೆ (Ayodhya) ರಾಮಮಂದಿರದ ಉದ್ಘಾಟನೆಯ ಕುರಿತು ಮಾತನಾಡಿದ್ದಾರೆ. ಅದಷ್ಟೇ ಅಲ್ಲ, ಈ ಸಂಭ್ರಮದಲ್ಲಿ ಶಂಕರ್ ಮಹಾದೇವನ್ ಕೂಡ ಭಾಗಿಯಾಗಿದ್ದಾರೆ.
ಈಗಾಗಲೇ ಅಯೋಧ್ಯೆ ತಲುಪಿರುವ ಶಂಕರ್ ಮಹಾದೇವನ್ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಇಡೀ ದೇಶ ಮಾತ್ರವಲ್ಲದೇ ಇಡೀ ಜಗತ್ತು ಈ ಕ್ಷಣಕ್ಕಾಗಿ ಕಾಯುತ್ತಿದೆ. ರಾಮಮಂದಿರ ಪ್ರಾಣ ಪ್ರತಿಷ್ಠೆ ನೋಡಲು ನಾವು ತುಂಬಾ ಸಂತೋಷ ಮತ್ತು ಉತ್ಸುಕರಾಗಿದ್ದೇವೆ. ನಾವು ಕೂಡ ಅತಿಥಿಗಳಾಗಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗ್ತಿರೋದ್ದಕ್ಕೆ ಖುಷಿಯಿದೆ ಎಂದು ಹೇಳಿದ್ದಾರೆ.
ಬಳಿಕ ಅಯೋಧ್ಯೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠೆಯು ಭಾರತದಲ್ಲಿ ನಡೆಯಲಿರುವ ದೊಡ್ಡ ಸಂಭ್ರಮ ಎಂದು ನಾನು ಭಾವಿಸುತ್ತೇನೆ ಎಂದು ಶಂಕರ್ ಮಹಾದೇವನ್ ಮಾತನಾಡಿದ್ದಾರೆ.