ತುಮಕೂರು: ಬಸವಣ್ಣನವರ (Basavanna) ತತ್ವಗಳು ಜಾರಿ ಆಗಿದ್ದರೆ ಧರ್ಮಗಳ ನಡುವೆ ಈ ದ್ವೇಷ ಇರುತ್ತಿರಲಿಲ್ಲ ಎಂದು ಸಚಿವ ಕೆ.ಎನ್ ರಾಜಣ್ಣ (K.N Rajanna), ಬಿಜೆಪಿ (BJP) ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಸ್ವಾಮೀಜಿಗಳ ನಿರ್ದೇಶನದ ಮೇರೆಗೆ ನಾನು ಮಾತನಾಡುತ್ತಿದ್ದೇನೆ. 12 ನೇ ಶತಮಾನದಲ್ಲಿ ಬಸವಣ್ಣ ಅವರು ಮಾಡಿದ ಕೆಲಸವನ್ನು ಈಗ ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ.
Ram Mandir: ಅಯೋಧ್ಯಾ ನಗರಿಯಲ್ಲಿ ವಿರಾಜಮಾನನಾದ ಬಾಲರಾಮ: ಹಿಂದೂಗಳ ಕನಸು ನನಸು!
ಹಾಗಂತ ಹಿಂದೆ ಯಡಿಯೂರಪ್ಪನವರು ಏನೂ ಮಾಡಿಲ್ಲ ಅಂತ ಅರ್ಥವಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಹೊಗಳಿದ್ದಾರೆ. ಸರ್ಕಾರಿ ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರ ಇಟ್ಟು, ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದು ಸಿದ್ದರಾಮಯ್ಯನವರು. ಕಟ್ಟಕಡೆಯ ಜನರಿಗೂ ತಲುಪುವಂತೆ ಮಾಡಿದ್ದು ಅವರೇ ಎಂದು ತಿಳಿಸಿದ್ದಾರೆ. ಇವತ್ತು ಸಮಾಜದಲ್ಲಿ ಇರುವ ಪರಸ್ಪರ ಧರ್ಮಗಳ ನಡುವೆ ದ್ವೇಷದ ವಾತಾವರಣ ಮುಂದುವರೆದಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.