ಚಿಕ್ಕೋಡಿ: ನನ್ನನ್ನು ಹಿಮ್ಮೆಟ್ಟಿಸಲು ಡಿಕೆಶಿ ಅಪ್ಪ ಬಂದ್ರೂ ನಾನು ಬಿಡುವುದಿಲ್ಲ. ಸಿಡಿ ಪ್ರಕರಣದಲ್ಲಿ ಡಿ.ಕೆ ಶಿವಕುಮಾರ್ ನನಗೆ ಶಿಕ್ಷೆ ವಿಧಿಸಲು ಪ್ಲ್ಯಾನ್ ಮಾಡಿದ್ದ. ಆದರೆ ಅದು ಸಾಧ್ಯವಾಗಲಿಲ್ಲ. ಈಗ ಬ್ಯಾಂಕ್ಗೆ ವಂಚನೆ ಹೆಸರಿನಲ್ಲಿ 420 ಕೇಸ್ ದಾಖಲಿಸಿದ್ದಾನೆ. ನನ್ನ ಹೆಸರು ಟಿವಿಯಲ್ಲಿ ಬರೋದನ್ನು ನೋಡಿ ಸಮಾಧಾನ ಮಾಡಿಕೊಳ್ಳುತ್ತಿದ್ದಾನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಏಕವಚನದಲ್ಲೇ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Ram Mandir: ಅಯೋಧ್ಯಾ ನಗರಿಯಲ್ಲಿ ವಿರಾಜಮಾನನಾದ ಬಾಲರಾಮ: ಹಿಂದೂಗಳ ಕನಸು ನನಸು!
ಕಾಗವಾಡ ಶಾಸಕ ರಾಜು ಕಾಗೆ ವಿರುದ್ಧ ಮಾಜಿ ಶಾಸಕ ಶ್ರೀಮಂತ ಪಾಟೀಲ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ಈ ವೇಳೆ, ಕೇಸ್ ದಾಖಲಿಸಿ ಟಿವಿಯಲ್ಲಿ ನನ್ನ ಹೆಸರು ನೋಡಿ ಸಮಾಧಾನ ಮಾಡಿಕೊಳ್ಳುತ್ತಿದ್ದಾನೆ. ನಾನು ಗಟ್ಟಿಯಾಗೇ ಇದ್ದೇನೆ. ನನ್ನ ಹಿಮ್ಮೆಟ್ಟಿಸಲು ಡಿ.ಕೆ ಶಿವಕುಮಾರ್ ಅಪ್ಪ ಬಂದರೂ ನಾನು ಬಿಡುವುದಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.