ಬೆಂಗಳೂರು: ರೈತರ ಟೊಮೊಟೊ ತೋಟಕ್ಕೆ ನುಗ್ಗಿ ನಾಲ್ಕು ಕಾಡಾನೆಗಳು, ಬೆಳೆ ನಾಶ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಚಿಕ್ಕ ಹಾಗಡೆ ಗ್ರಾಮದಲ್ಲಿ ನಡೆದಿದೆ ರಾಜಪ್ಪ ಎಂಬವರಿಗೆ ಸೇರಿದ ಒಂದು ಎಕರೆ ಟಮೋಟೊ ತೋಟದಲ್ಲಿ ಈ ಒಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ..ಇತ್ತೀಚೆಗೆ ಕಾಡು ಪ್ರಾಣಿಗಳು ಆಹಾರ
ಹರಿಸಿಕೊಂಡು ಕಾಡುನಿಂದ ನಾಡಿನಕಡೆ ಮುಖ ಮಾಡುತ್ತಿದೆ ಅದರಲ್ಲೂ ತಮಿಳುನಾಡು ಗಡಿ ಭಾಗದ ವನಕನಹಳ್ಳಿ ಡೆಂಕಣಿಕೋಟೆ ಶಾಣ್ಮಾವು ಹೊಸೂರು ಭಾಗದಲ್ಲಿ ಕಾಣಿಸಿಕೊಳ್ಳುತ್ತಿದ್ದ ಕಾಡಾನೆಗಳು ಕರ್ನಾಟಕದ ಗಡಿಭಾಗದಲ್ಲಿ ಕಾಣಿಸಿಕೊಂಡಿದೆ ಇದರಿಂದ ಜನರಿಗೆ ನಿದ್ದೆಗೆಡಿಸಿದೆ,ಅದು ಮಾತ್ರವಲ್ಲದೆ ಕಾಡಂಚಿನಲ್ಲಿರುವ ಗ್ರಾಮಗಳಿಗೆ ಮತ್ತು ರೈತರಿಗೆ ತಲೆನೋವಾಗಿ ಪರಿಣಮಿಸಿದೆ, ವರ್ಷವೆಲ್ಲ ಕಷ್ಟಪಟ್ಟು ಬೆಳೆದ ಬೆಳೆ, ಕಾಡಾನೆಗಳಿಂದಾಗಿ ರೈತನ ಬಾಳಿಗೆ ಕೊಳ್ಳೆ ಇಟ್ಟಿದೆ..
Ram Mandir: ಅಯೋಧ್ಯಾ ನಗರಿಯಲ್ಲಿ ವಿರಾಜಮಾನನಾದ ಬಾಲರಾಮ: ಹಿಂದೂಗಳ ಕನಸು ನನಸು!
ಇನ್ನು ಕಳೆದ ರಾತ್ರಿ ನಾಲ್ಕು ಕಾಡಾನೆಗಳು ತೋಟಕ್ಕೆ ಲಗ್ಗೆ ಇಟ್ಟು ಟೆಮೋಟೊ ರಾಗಿ ಮೊದೆ ತಿಂದು ಕಾಡಾನೆಗಳು ದಾಂದಲೆ ನಡೆಸಿದ್ದಲ್ಲದೆ ರೈತನಿಗೆ ಲಕ್ಷಾಂತರ ರೂಪಾಯಿ ಬೆಳೆ ಹಾನಿ ಮಾಡಿದೆ ಅದಲ್ಲದೆ ತೋಟಕ್ಕೆ ನುಗ್ಗಿ ಸಂಪೂರ್ಣ ಬೆಳೆನಾಶ ಮಾಡಿದೆ ಇದರಿಂದ ಲಕ್ಷಾಂತರ ರೂಪಾಯಿ ರೈತರಿಗೆ ನಷ್ಟ ಆಗಿದೆ ಇದರಿಂದ ಕಣ್ಣೀರಿನಲ್ಲಿ ಕಾಳ ಕಳೆಯುವಂತಾಗಿದೆ. ಇನ್ನು ಅರಣ್ಯ ಅಧಿಕಾರಿಗಳು ಆನೆಗಳನ್ನು ಕಡಿವಾಣ ಹಾಕುವ ನಿಟ್ಟಿನಲ್ಲಿ ರೈತರ ಸಾಕಷ್ಟ ಬರಿ ದೂರುಗಳು ಸಲ್ಲಿಕೆ ಮಾಡಿದ್ರು ಸಹ ಅರಣ್ಯ ಅಧಿಕಾರಿಗಳು ಕಂಡು ಕಾಣದ ರೀತಿಯಲ್ಲಿ ಇದ್ದಾರೆ..