ಬೆಂಗಳೂರು:- ಕರ್ನಾಟಕದಲ್ಲಿ ಗೆದ್ದ ಮಾತ್ರಕ್ಕೆ ಇಡೀ ದೇಶವನ್ನೇ ಗೆಲ್ಲುತ್ತೇವೆಂಬ ಭ್ರಮೆ ಬೇಡ ಎಂದು ಹೇಳುವ ಮೂಲಕ ಸಿಎಂಗೆ ಸಚಿವ ಜೋಶಿ ಟಾಂಗ್ ಕೊಟ್ಟಿದ್ದಾರೆ.
ಈ ಸಂಬಂಧ x ಮಾಡಿರುವ ಅವರು, ಸಿಎಂ ಸಿದ್ದರಾಮಯ್ಯನವರೇ, ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲೆಂದು ರಾಹುಲ್ ಗಾಂಧಿಯಂತಹ ಅಪ್ರಬುದ್ಧ ನಾಯಕನಿಗೆ ಉಧೋ..ಉಧೋ ಎನ್ನುವ ನಿಮಗೆ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ? ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ನಿಜವಾದ ರಾಮ ಭಕ್ತರಾಗಿದ್ದರೆ ಅಯೋಧ್ಯೆ ರಾಮ ಮಂದಿರದಲ್ಲಿ ನಿಂತು ಪ್ರಮಾಣ ಮಾಡಲಿ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ಗೆ ಪ್ರಲ್ಹಾದ್ ಜೋಶಿ
34000 ಚದರ ಕಿಲೋಮೀಟರ್ ಭಾರತದ ಅಕ್ಸಾಯ್ ಚಿನ್ ಅನ್ನು ಚೈನಾ ತೆಕ್ಕೆಗೆ ಹಾಕಿದ್ದು ಜವಹಾರ್ ಲಾಲ್ ನೆಹರೂ ಅವರು ಪ್ರಧಾನಿಯಾಗಿದ್ದಾಗ ಮರೆತಿಲ್ಲ ತಾನೆ? ಟಿಬೆಟ್ ಪ್ರಾಂತ್ಯ ಚೈನಾದ ಕೈವಶವಾಗುವಂತೆ ಮಾಡಿದ್ದು, ಇಂದು ಚೈನಾವನ್ನು ನಮ್ಮ ನೆರೆ ರಾಷ್ಟ್ರವನ್ನಾಗಿ ಮಾಡಿದ್ದು ನಿಮ್ಮ ಕಾಂಗ್ರೆಸ್ನ ಘನ ಸರ್ಕಾರವೇ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.
1962 ಯುದ್ಧದ ಸಂದರ್ಭದಲ್ಲಿ ಸೈನಿಕರಿಗೆ ಸರಿಯಾದ ಶಸ್ತ್ರಾಸ್ತ್ರಗಳನ್ನ, ಬೂಟುಗಳನ್ನೂ ನೀಡದೇ ನಮ್ಮ ಸೈನಿಕರ ಬಲಿದಾನ ತೆಗೆದುಕೊಂಡಿದ್ದು ನಿಮ್ಮ ಕಾಂಗ್ರೆಸ್ ಪಕ್ಷವೇ. ಸೈನಿಕರಿಗೆ, ದೇಶಕ್ಕೆ ಅಗೌರವ ತೋರುವುದು ನಿಮ್ಮ ಅನುವಂಶಿಕ ಗುಣ. ಸರ್ಜಿಕಲ್ ಸ್ಟ್ರೈಕ್ ಆದಾಗಲೂ ಸಾಕ್ಷಿ ಕೇಳಿದ ಮಹಾತ್ಮರು ನೀವು. ಇನ್ನು ಚೀನಾ ವಿಚಾರವಾಗಿ ಮೋದಿ ಸರ್ಕಾರದ ದಿಟ್ಟ ನಿಲುವುಗಳಿಂದಲೇ ಇಂದು ಚೈನಾಕ್ಕೆ ಸಮರ್ಪಕ ಉತ್ತರ ನೀಡಲು ಸಾಧ್ಯವಾಗಿದ್ದು ಎಂದಿದ್ದಾರೆ.
ಸುಳ್ಳೇ ನಿಮ್ಮ ಮನೆ ದೇವರಾಗಿದ್ದು, ಆ ಸುಳ್ಳಿನ ಮೇಲೆ ರಾಜಕಾರಣ ಮಾಡುವುದು ಕಾಂಗ್ರೆಸ್ನ ಇತಿಹಾಸವೇ ಆಗಿದೆ. ಸಹಕಾರಿ ತತ್ವಗಳ ವಿಚಾರದಲ್ಲಿ ಹಲವಾರು ಬದಲಾವಣೆಗಳನ್ನು ತಂದು ಕೇಂದ್ರ ಸರ್ಕಾರ ನೀತಿ ಆಯೋಗ ಜಾರಿಗೊಳಿಸಿದೆ. ಕೇಂದ್ರ ಸರ್ಕಾರ ತೆರಿಗೆ ಮತ್ತು ಅನುದಾನವನ್ನು ಕೂಡ ಕರ್ನಾಟಕ ಸರ್ಕಾರಕ್ಕೆ ತ್ರಿಗುಣ ಗೊಳಿಸಿದೆ ಎಂಬುದು ನಿಮಗೂ ತಿಳಿದಿರುವ ವಿಚಾರ ಎಂದರು.