ಧಾರವಾಡ: ಕಾರ್ಮಿಕ ಇಲಾಖೆಯಲ್ಲಿ ಸುಮಾರು ಎರಡೂವರೆ ಲಕ್ಷ ಬೋಗಸ್ ಕಾರ್ಡ್ಗಳನ್ನು ಕೂಡಲೇ ರದ್ದು ಪಡಿಸುವಂತೆ ಅಧಿಕಾರಿಗಳಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸೂಚನೆ ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಸಚಿವರು, ರಾಜ್ಯಾದ್ಯಂತ ಕಾರ್ಮಿಕರಿಗೆ 46 ಲಕ್ಷ ಕಾರ್ಡ್ ನೀಡಲಾಗಿದೆ. ಅದರಲ್ಲಿ 2.5 ಲಕ್ಷ ಬೋಗಸ್ ಎಂದು ತಿಳಿದುಬಂದಿದೆ. ಹಾಗಾಗಿ ಬೋಗಸ್ ಕಾರ್ಡ್ಗಳನ್ನು ರದ್ದು ಮಾಡಿ ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.
ರಾಜ್ಯದ ಎಲ್ಲಾ ತಾಲೂಕುಗಳಿಂದ 2 ರಿಂದ 3 ಲಕ್ಷ ಸದಸ್ಯರು ನೋಂದಣಿ ಆಗಿದ್ದಾರೆ. ಆದರೆ ಅಷ್ಟು ಜನರಲ್ಲಿ ಕೇವಲ 30 ಸಾವಿರ ಸದಸ್ಯರಿಗೆ ಮಾತ್ರ ಗ್ರಾಚ್ಯುಟಿ ಬಗ್ಗೆ ತಿಳುವಳಿಕೆ ಇದೆ. ಉಳಿದವರಿಗೆ ಯಾಕೆ ಮಾಹಿತಿ ಇಲ್ಲ ಎಂದು ಅಧಿಕಾರಿಗಳನ್ನು ಸಚಿವರು ತರಾಟೆಗೆ ತೆಗೆದುಕೊಂಡರಲ್ಲದೇ, 46 ಲಕ್ಷ ಕಾರ್ಮಿಕರ ಬಗ್ಗೆ ಯಾರು ಹೊಣೆಗಾರರಾಗುತ್ತೀರಾ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.
Sleeping Tip: 6 ಗಂಟೆಗಿಂತ ಕಡಿಮೆ ನಿದ್ದೆ ಮಾಡ್ತೀರಾ..?! ವಕ್ಕರಿಸಿಬಿಟ್ಟೀತು ಈ ಮಾರಣಾಂತಿಕ ಖಾಯಿಲೆ ಹುಷಾರ್!
ಇಡೀ ದೇಶದ ಸಾಲದ ಬಗ್ಗೆ ಕೇಂದ್ರ ಸರ್ಕಾರ ಮೊದಲು ಶ್ವೇತಪತ್ರ ಹೊರಡಿಸಲಿ. 2014ರ ವರೆಗೆ ಎಷ್ಟು ಸಾಲವಿತ್ತು. ಇವರು ಅಧಿಕಾರಕ್ಕೆ ಬಂದ ಮೇಲಿಂದ ಎಷ್ಟು ಸಾಲ ಹೆಚ್ಚಾಗಿದೆ ಎಂಬುದನ್ನು ಮೊದಲು ತಿಳಿಸಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಆಗ್ರಹಿಸಿದ್ದಾರೆ. ಈ ಮೂಲಕ ಅನುದಾನ ತಾರತಮ್ಯ ಬಗ್ಗೆ ಬಿಜೆಪಿ ಮುಖಂಡ ಸಿ.ಟಿ. ರವಿ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದರು.