ವಿಜಯಪುರ : ಮುಳವಾಡ ಏತ ನೀರಾವರಿ ಯೋಜನೆಯ ಎಡ ಹಾಗೂ ಬಲ ಕಾಲುವೆಗಳಿಗೆ ನೀರು ಹರಿಸುವಂತೆ ವಿಜಯಪುರ ಜಿಲ್ಲೆಯ ಕೋಲ್ಹಾರ-ಬಾಗೇವಾಡಿ ರಾಜ್ಯ ಹೆದ್ದರಿ ತಡೆದು ರೈತರು ಪ್ರತಿಭಟನೆ ನಡೆಸಿದರು.
ಮಟ್ಟಿಹಾಳ ಕೆ.ಬಿ.ಜೆ.ಎನ್.ಎಲ್ ಕಚೇರಿಗೆ ಬೀಗ ಜಡಿದು ರಾಜ್ಯ ರೈತ ಸಂಘ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಕಾಲುವೆ ನೀರು ಬಿಡದೆ ಇರೋದಕ್ಕೆ ಹೈವೆ ರಸ್ತೆಯಲ್ಲಿ ಟೈರ್ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ಸಮಸ್ಯೆ ಆಗಿದೆ. ಆದ್ದರಿಂದ ತಕ್ಷಣವೇ ನೀರು ಬಿಡುವಂತೆ ಆಗ್ರಹಿಸಿದರು.