ಕೋಲಾರ:- ಹಿಂದುಳಿದ, ದಲಿತ ಅಲ್ಪಸಂಖ್ಯಾತ ರಿಗೆ ಸರ್ಕಾರದಿಂದ ಬರುವ ಸೌಲಬ್ಯಗಳ ಆಯ್ಕೆಯ ಅಧಿಕಾರವನ್ನು ಜನಪ್ರತಿನಿಧಿಗಳಿಂದ ಹಿಂಪಡೆಯಬೇಕು, ಸರ್ಕಾರಿ ಭೂ ಮಂಜುರಾತಿಯಲ್ಲಿ ಪಾರದರ್ಶಕತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರುಸುವಂತೆ ಒತ್ತಾಯಿಸಿ ಇಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.
ಇದೇ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಚಾಲಕ ಎಸ್ ಎಂ ವೆಂಕಟೇಶ್ ಮಾತನಾಡಿ ಸರ್ಕಾರಿ ಸೌಲಬ್ಯಗಳನ್ನು ಬಡಜನರಿಗೆ ತಲುಪಿಸ ಬೇಕಾದ ಜನಪ್ರತಿನಿಧಿಗಳು ತಮ್ಮ ಬೆಂಬಲಿಗರಿಗೆ ಮಾತ್ರ ಸೌಲಬ್ಯಗಳನ್ನು ನೀಡುತ್ತಿದ್ದಾರೆ ನಿಜವಾದ ಬಡ ಜನರಿಗೆ ಅವಷ್ಯಕತೆ ಇರುವವರಿಗೆ ಸಿಗುತ್ತಿಲ್ಲ , ಭೂ ಮಂಜೂರಾತಿ ಸಮಿತಿ ನಿಯಮಗಳನ್ನು ಗಾಳಿಗೆ ತೂರಿ ಸಾಕಷ್ಟು ಭೂಮಿ ಹೊಂದಿರುವವರಿಗೆ ಮತ್ತೆ ಭೂಮಿ ಮಂಜೂರಾತಿ ಮಾಡಲಾಗುತ್ತಿದೆ,
ಇನ್ನು ಗೋಮಾಳ , ಗುಂಡುತೋಪು, ಸೇರಿದಂತೆ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ನಕಲಿ ದಾಖಲೆ ಸೃಷ್ಟಿಸಿಕೊಂಡು ಒತ್ತುವರಿ ಮಾಡಿಕೊಂಡವರ ಮೇಲೆ ಕ್ರಮ ಜರುಗಿಸಬೇಕು, ಸರ್ಕಾರಿ ವಿದ್ಯಾರ್ಥಿ ನಿಲಯ ಗಳಲ್ಲಿ ಬೇರೆ ಇಲಾಖೆ ಅಧಿಕಾರಿಗಳ ನಿಯೋಜನೆ ನಿಲ್ಲಿಸಬೇಕು, ಹಸು ಮತ್ತು ಕುರಿಗಳ ಇನ್ಸೂರೆಸ್ಸ್ ಬಿಡುಗಡೆ, ಪಿಟಿಸಿಎಲ್ ಕೇಸ್ ಗಳಲ್ಲಿ ದಲಿತರ ಮೇಲಾಗುತ್ತಿರುವ ಅನ್ಯಾಯ ತಡೆಯುವುದು, ಜಿಲ್ಲೆಯ ಕೈಗಾರಿಕಾ ಪ್ರದೇಶಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಉದ್ದಿಮೆಗಳಿಗೆ ಉತ್ತೇಜನ ನೀಡುವುದು, ಬಾಬಾ ಸಾಹೇಬ್ ಅಂಬೇಡ್ಕರ್ ಜಿಲ್ಲೆಗೆ ಭೇಟಿನೀಡಿದ ಸ್ಥಳಗಳಲ್ಲಿ ರಾಷ್ಟ್ರೀಯ ಸ್ಮಾರಕ, ಅಂಬೇಡ್ಕರ್ ಅದ್ಯಯನ ಕೇಂದ್ರ, ಗ್ರಂಥಾಲಯ ಗಳನ್ನು ನಿರ್ಮಿಸುವುದು, ಚನ್ನದಾಸರಿ ಮತ್ತು ಶಿಳ್ಳೇಖ್ಯಾತಿ ಜಾತಿಗಳಿಗೆ ಜಾತಿ ಪ್ರಮಾಣಪತ್ರ ನೀಡುವುದು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ದಲಿತರ ಕೇರಿ, ಶಾಲೆಗಳಿಗೆ ದಾರಿ ಒದಗಿಸಿಕೊಡಬೇಕು ಎಂದು ಒತ್ತಾಯಿಸಲಾಯಿತು.
ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಸೂಲಿಕುಂಟೆ ರಮೇಶ್, ಜಿಲ್ಲಾ ಸಂಚಾಲಕ ನಾಗನಾಳ ಮುನಿಯಪ್ಪ ಸೇರಿದಂತೆ ನೂರಾರು ಮಂದಿ ರಸ್ತೆ ಜಾಥಾ ಮೂಲಕ ಆಗಮಿಸಿ ಜಿಲ್ಲಾಧಿಕಾರಿ ಅಕ್ರಂಪಾಷಾ ರವರಿಗೆ ಮನವಿ ಪತ್ರವನ್ನು ಸಹ ಸಲ್ಲಿಸಲಾಯಿತು