ಜನವರಿ 25 ರಂದು ಹೈದರಾಬಾದ್ನಲ್ಲಿ ಮೊದಲನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ ಈ ಟೆಸ್ಟ್ ಸರಣಿಯಲ್ಲಿ ಕೆಎಲ್ ರಾಹುಲ್ ವಿಕೆಟ್ ಕೀಪರ್ ಆಗಿ ಆಡುವುದಿಲ್ಲ. ಪೂರ್ಣ ಪ್ರಮಾಣದ ಇಬ್ಬರು ವಿಕೆಟ್ ಕೀಪರ್ಗಳ ಪೈಕಿ ಒಬ್ಬರು ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆಂದು ಟೀಮ್ ಇಂಡಿಯಾ ಹೆಡ್ ಕೋಚ್ ರಾಹುಲ್ ದ್ರಾವಿಡ್ ಸ್ಪಷ್ಟಪಡಿಸಿದ್ದಾರೆ.
ಉಭಯ ತಂಡಗಳು ಐದು ಟೆಸ್ಟ್ ಸರಣಿಯಲ್ಲಿ ಕಾದಾಟ ನಡೆಸಲಿವೆ. ರಿಷಭ್ ಪಂತ್ ಅಲಭ್ಯತೆಯಿಂದಾಗಿ ಭಾರತ ಟೆಸ್ಟ್ ತಂಡದಲ್ಲಿ ಕೆಎಸ್ ಭರತ್, ಇಶಾನ್ ಕಿಶನ್, ಕೆಎಲ್ ರಾಹುಲ್ ಅವರು ಇಷ್ಟು ದಿನಗಳ ಕಾಲ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ನಿರ್ವಹಿಸಿದ್ದರು. ಇದೀಗ ಇಂಗ್ಲೆಂಡ್ ಟೆಸ್ಟ್ ಸರಣಿಗೆ ಇಶಾನ್ ಕಿಶನ್ ಅವರನ್ನು ಕೈ ಬಿಟ್ಟಿದ್ದು ಪೂರ್ಣ ಪ್ರಮಾಣದ ವಿಕೆಟ್ ಕೀಪರ್ಗಳಾಗಿ ಕೆಎಸ್ ಭರತ್ ಮತ್ತು ಧೃವ್ ಜುರೆಲ್ಗೆ ಅವಕಾಶ ನೀಡಲಾಗಿದೆ.
ಮೊದಲನೇ ಟೆಸ್ಟ್ ಪಂದ್ಯದ ನಿಮಿತ್ತ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ದ್ರಾವಿಡ್, “ಕೆಎಲ್ ರಾಹುಲ್ ಈ ಟೆಸ್ಟ್ ಸರಣಿಯಲ್ಲಿ ವಿಕೆಟ್ ಕೀಪರ್ ಆಗಿ ಆಡುವುದಿಲ್ಲ. ವಿಕೆಟ್ ಕೀಪರ್ ಸೆಲೆಕ್ಷನ್ ಬಗ್ಗೆ ನಾವು ಸ್ಪಷ್ಟತೆಯನ್ನು ಹೊಂದಿದ್ದೇವೆ. ಹೌದು ದಕ್ಷಿಣ ಆಫ್ರಿಕಾದಲ್ಲಿ ಕೆಎಲ್ ರಾಹುಲ್ ವಿಕೆಟ್ ಕೀಪರ್ ಆಗಿ ಅದ್ಭುತ ಕಾರ್ಯವನ್ನು ನಿರ್ವಹಿಸಿದ್ದರು. ಈ ಸರಣಿ ಡ್ರಾ ಆಗುವಲ್ಲಿ ಇವರು ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದರು,” ಎಂದು ಶ್ಲಾಘಿಸಿದ್ದಾರೆ.