ಕಂಪ್ಲಿ :- ನಗರದಲ್ಲಿ ದಿನದಿಂದ ದಿನಕ್ಕೆ ಬಿಡಾಡಿ ದನಕರುಗಳ ಸಂಖ್ಯೆಗಳು ಏರಿಕೆಯಾಗಿ ಬಹುದೊಡ್ಡ ಸಮಸ್ಯೆಯಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲೆ ಬಿಡಾಡಿ ದನಕರುಗಳು ಅಡ್ಡಾದಿಡ್ಡಿಯಾಗಿ ಓಡಾಡುತ್ತಿರುವುದು ಮಾತ್ರವಲ್ಲದೇ ನಡುರಸ್ತೆಯಲ್ಲೆ ಮಲಗುತ್ತಿರುವುದರಿಂದ ಸುಗಮ ಸಂಚಾರಕ್ಕೆ ತೀವ್ರ ಅಡಚಣೆಯಾಗತೊಡಗಿದೆ.
ನಗರದಲ್ಲಿ ಏರುತ್ತಿರುವ ಬಿಡಾಡಿ ದನಕರುಗಳನ್ನ ಹಿಡಿದು ಕಂಪ್ಲಿ ತಾಲೂಕಿನ ದುಸಗಿಯಲ್ಲಿರುವ ಗೋಶಾಲೆಗೆ ಕಳುಹಿಸುವ ಬಗ್ಗೆ ಪುರಸಭೆ ಚಿಂತನೆಯನ್ನು ನಡೆಸಿತ್ತು. ನಗರ ನಗರದ ಪುರಸಭೆ ಚಿಂತನೆಯನ್ನು ಮತ್ತೆ ಮುನ್ನಲೆಗೆ ತರುವ ನಿಟ್ಟಿನಲ್ಲಿ ಬಿಡಾಡಿ ದನಕರುಗಳು ನಡು ರಸ್ತೆಯಲ್ಲಿ ಮಲಗಿರಬಹುದೇ ಎಂಬ ಚರ್ಚೆಗೆ ಕಾರಣವಾದಂತಿದೆ ಬಿಡಾಡಿ ದನಕರುಗಳು ಮಲಗಿರುವ ದೃಶ್ಯ.
ಬಿಡಾಡಿ ದನ ಕರುಗಳ ನಿಯಂತ್ರಣಕ್ಕೆ ಇನ್ನಾದರೂ ನಗರಸಭೆ ಸೇರಿದಂತೆ ಸಂಬಂಧಪಟ್ಟ ಇಲಾಖೆಯವರು ತ್ವರಿತ ಕ್ರಮವನ್ನು ಕೈಗೊಳ್ಳಬೇಕಾಗಿದೆ.