ಮಂಗಳೂರು:- ನಗರದ ರಾವ್ ಆಂಡ್ ರಾವ್ ಸರ್ಕಲ್ ಬಳಿ ಪಾರ್ಕಿಂಗ್ ವಿಚಾರಕ್ಕೆ ಸಹೋದರರಿಬ್ಬರ ಮೇಲೆ ಹಲ್ಲೆ ಮಾಡಿದ್ದು, ತೀವೃ ಗಾಯಗಳಾಗಿರುವಂತಹ ಘಟನೆ ಜರುಗಿದೆ
ಫಾರೂಕ್ ಮತ್ತು ಇತರೆ ಎಂಟು ಮಂದಿಯಿಂದ ಉಲ್ಲಾಸ್ ರಾವ್, ಹರ್ಷಿತ್ ರಾವ್ ಸಹೋದರರ ಮೇಲೆ ಹಲ್ಲೆ ನಡೆಸಿದ ಆರೋಪ ಮಾಡಲಾಗಿದೆ. ಎಂಪಾಯರ್ ಹೊಟೇಲ್ಗೆ ಊಟಕ್ಕೆಂದು ಸಹೋದರರು ಹೋಗಿದ್ದಾರೆ.
ಹೋಟೆಲ್ ಮಾಲೀಕನ ತಮ್ಮ ಹಾಗೂ ಇತರರಿಂದ ಕಲ್ಲು, ಕೈಯಿಂದ ಹಲ್ಲೆ ಮಾಡಿರುವುದಾಗಿ ಆರೋಪಿಸಿದ್ದಾರೆ. ಸಹೋದರಿಬ್ಬರ ತಲೆಗೆ, ತುಟಿಗೆ ಗಾಯಗಳಾಗಿದ್ದು, ಘಟನೆ ಸಂಬಂಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.