ಮೈಸೂರು;- ತಮಿಳುನಾಡಿಗೆ ಅಗತ್ಯ ನೀರು ಕೊಡಲು ನಾವು ಸಿದ್ಧ ಎಂದು DCM ಡಿಕೆ ಶಿವಕುಮಾರ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ತಮಿಳುನಾಡಿಗೆ ಎಷ್ಟು ನೀರು ಕೊಡಬೇಕೋ ಅದನ್ನು ಕೊಡಲಿಕ್ಕೆ ನಾವು ಬದ್ಧರಿದ್ದೇವೆ.
ಮೇಕೆದಾಟು ಯೋಜನೆಗೆ ಹೆಚ್.ಡಿ.ದೇವೇಗೌಡರು ಅನುಮತಿ ಕೊಡಿಸಲಿ. ಅವರು ಮೇಕೆದಾಟು ವಿಚಾರದಲ್ಲಿ ಸರ್ಕಾರ ಕೆಲಸ ಮಾಡುತ್ತಿಲ್ಲ. ಪ್ರಧಾನಿಯವರಿಗೆ ಅವರು ಹತ್ತಿರವಿದ್ದಾರೆ. ಅವರನ್ನು ತಡೆದುಕೊಂಡಿರುವವರು ಯಾರು ಎಂದು ಪ್ರಶ್ನೆ ಮಾಡಿದ್ದಾರೆ.
ನಮ್ಮನ್ನು ಸೇರಿಸಿಕೊಂಡು ಮೇಕೆದಾಟು ಸಮಸ್ಯೆ ಬಗೆಹರಿಸಬಹುದಲ್ವ? ನಮ್ಮ ನಡಿಗೆ ನೀರಿಗೋಸ್ಕರ. ನಮ್ಮ ಅವಧಿ ಮುಗಿಯೋ ಒಳಗೆ ಮೇಕೆದಾಟು ಯೋಜನೆಯನ್ನು ಜಾರಿ ಮಾಡುತ್ತೇವೆ. ರಾಜ್ಯದ ಯಾವೊಬ್ಬ ಸಂಸದ ಕೂಡ ಮಾತನಾಡಿಲ್ಲ. ಸಂಸದ ಪ್ರತಾಪ್ ಸಿಂಹ ಮಾತನಾಡಿದ್ರ? ನಮಗೆ ನೀರೇ ಆಧಾರ ಸ್ಥಂಭ ಎಂದು ಡಿಕೆಶಿ, ದೇವೇಗೌಡರು ಮತ್ತು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಪಿರಿಯಾಪಟ್ಟಣ ಜನರಿಗೆ ಧನ್ಯವಾದ ತಿಳಿಸಲು ನಾನು ಇಲ್ಲಿಗೆ ಬಂದಿದ್ದೇನೆ. ಈ ಜಿಲ್ಲೆಯಲ್ಲಿ ಅತಿ ಹೆಚ್ಚಿನ ಶಾಸಕರನ್ನ ನೀಡಿದ್ದೀರಾ. ಈ ಸರ್ಕಾರವನ್ನು ರಾಜ್ಯದಲ್ಲಿ ತಂದ ಮೇಲೆ ಒಳ್ಳೆಯ ಅಭಿವೃದ್ಧಿ ಮಾಡಿದ್ದೇವೆ. ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಎಂದಿದ್ದಾರೆ