ಚಿತ್ರದುರ್ಗ: “ಯಾವ ಹಿಂದೂಗಳು ಬೇರೆ ಧರ್ಮ ಜಾತಿಯನ್ನು ಗೌರವಿಸುತ್ತಾರೋ ಅವರೇ ನಿಜವಾದ ಹಿಂದೂಗಳು’’ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಚಿತ್ರದುರ್ಗ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ಬಿಜೆಪಿ ಪಕ್ಷದವರು ನಾವು (ಕಾಂಗ್ರೆಸ್ಸಿನವರು) ರಾಮನ ಭಕ್ತರಲ್ಲ ಎಂಬಂತೆ ಬಿಂಬಿಸುತ್ತಾರೆ’’ ಎಂಬ ಪ್ರಶ್ನೆಗೆ ಉತ್ತರಿಸಿದರು.
“ದೇವರ ಹೆಸರಿನಲ್ಲಿ ರಾಜಕಾರಣ ಮಾಡುವುದು ಒಳ್ಳೆಯ ಪದ್ಧತಿಯಲ್ಲ. ಸಂವಿಧಾನವೇ ನಮ್ಮ ದೇಶದ ದೇವರು. ಅದನ್ನು ಮನೆಗೆ ಅಡವಿಡಬಾರದು. ಒಂದೊಂದು ದೇವರನ್ನು ಒಂದೊಂದು ಪಕ್ಷಕ್ಕೆ ಹರಡಬಾರದು. ನೀವು (ಬಿಜೆಪಿ) ರಾಮನ ಭಕ್ತರಾದರೆ ಇನ್ನೊಬ್ಬರು ರಾಮನ ವಿರೋಧಿಗಳೇ’’ ಎಂದು ಪ್ರಶ್ನಿಸಿದರು. “ನಾವು ಎಲ್ಲಾ ಧರ್ಮ ದೇವರ ಭಕ್ತರು ಅಧಿಕಾರದಲ್ಲಿದ್ದಾಗ ನಾವು ಬಹಳ ಜವಾಬ್ದಾರಿಯಿಂದ ಇರಬೇಕು’’ ಎಂದು ತಿಳಿಸಿದರು.
ನಾಟಕದ ಪ್ರದರ್ಶನದ ವೇಳೆ ವೇದಿಕೆಯಲ್ಲೇ ಕುಸಿದು ಬಿದ್ದ ಹನುಮ ಪಾತ್ರಧಾರಿ ಸಾವು..! Video
ಇದಲ್ಲದೆ, “ಬರುವ ಲೋಕಸಭಾ ಚುನಾವಣೆಯಲ್ಲಿ ಹೈಕಮಾಂಡ್ ಸೂಚಿಸುವಂತೆ ಅಭ್ಯರ್ಥಿಗಳ ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ಉಸ್ತುವಾರಿಗಳ ಕೆಲಸವಾಗಿದೆ. ನಾನು ಮಂಗಳೂರು ಉಸ್ತುವಾರಿ ಇದ್ದೇನೆ. ಅಲ್ಲೆಲ್ಲಾ ಒತ್ತು ಕೊಡಲು ಸೂಚಿಸಿದ್ದಾರೆ. ಹಾಲಿ ಸಚಿವರಿಗೂ ಲೋಕಸಭೆಗೆ ಹೋಗಲು ಹೇಳಿದರೆ ನಾವು ತಲೆ ಬಾಗಬೇಕಾಗುತ್ತದೆ. ಪ್ರಜಾ ಪ್ರಭುತ್ವ ಉಳಿಯಬೇಕಾದರೆ ಪಕ್ಷದ ವರಿಷ್ಠರು ಹೇಳಿದಂತೆ ಕೇಳಬೇಕಾಗುತ್ತದೆ’’ ಎಂದರು.