ಕೊಡಗು: ಬಿಜೆಪಿಗೆ ಜಗದೀಶ್ ಶೆಟ್ಟರ್ ಮರು ಸೇರ್ಪಡೆಯಾದ ವಿಚಾರ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಕೊಡಿಗಿನಲ್ಲಿ ಮಾತನಾಡಿದ ಅವರು, ನಿನ್ನೆ ನಾನು ಕರೆ ಮಾತಾಡಿದಾಗ ನಾನು ಹೋಗಲ್ಲ ಎಂದಿದ್ದರು. ನಾವು ಸೀನಿಯರ್ ಲೀಡರ್ ಎಂದು ಸ್ಥಾನಮಾನ ಕೊಟ್ಟಿದ್ವಿ. ಈಗ ನಾನು ಫ್ಯಾಕ್ಸ್ನಲ್ಲಿ ರಾಜೀನಾಮೆ ಕೊಟ್ತೇನೆ ಅಂದಿದ್ದಾರೆ.
BREAKING.. Jagadish Shettar: ಅಮಿತ್ ಶಾ ಮಾತುಕತೆ ಯಶಸ್ವಿ: ಕಾಂಗ್ರೆಸ್ʼಗೆ ಗುಡ್ ಬೈ ಹೇಳಿದ ಮಾಜಿ ಸಿಎಂ
ಒತ್ತಡದಲ್ಲಿ ಕರೆದುಕೊಂಡು ಹೋಗಿದ್ದಾರೋ ಏನೋ ಗೊತ್ತಿಲ್ಲ. ಟಿಕೆಟ್ ತಪ್ಪಿಸಿದಾಗ ಶೆಟ್ಟರ್ಗೆ ದೇಶದ ಹಿತ ಗೊತ್ತಿರಲಿಲ್ವಾ? ನಾವು ಅವರನ್ನ ಬಹಳ ಗೌರವದಿಂದ ನಡೆಸಿಕೊಂಡಿದ್ದೇವೆ. ನನಗೆ ಈವರೆಗೂ ರಾಜೀನಾಮೆ ಪತ್ರ ತಲುಪಿಲ್ಲ. ಶೆಟ್ಟರ್ ಅವರು ಮಾತಾಡಲಿ ಬಳಿಕ ಮುಂದಿನ ದಿನಗಳಲ್ಲಿ ನಾನು ಮಾತಾಡ್ತೇನೆ ಎಂದರು.