ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಬಿಜೆಪಿಗೆ ವಾಪಸಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಮಧುರಾ ಕಾಲೋನಿಯಲ್ಲಿರುವ ಜಗದೀಶ ಶೆಟ್ಟರ ನಿವಾಸದಲ್ಲಿ ಜಮಾಯಿಸಿದ ನೂರಾರು ಬಿಜೆಪಿ ಕಾರ್ಯಕರ್ತರು ಮತ್ತು ಪಾಲಿಕೆ ಸದಸ್ಯರು ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.
ಶೆಟ್ಟರ ನಿವಾಸದಲ್ಲೇ ಕುಳಿತು ಘರ್ ಪಾಪ್ಸಿಯ ದೃಷ್ಯವನ್ನು ಟಿವಿಯಲ್ಲಿ ನೋಡುತ್ತ, ಪ್ರಧಾನಿ ನರೇಂದ್ರ ಮೋದಿ, ಪ್ರಹ್ಲಾದ ಜೋಶಿ ಹಾಗೂ ಜಗದೀಶ ಶೆಟ್ಟರಗೆ ಜೈಕಾರ ಹಾಕುತ್ತ ಸಂಭ್ರಮಿಸಿದರು. ಅಲ್ಲದೆ, ಶೆಟ್ಟರ್ ಭಾವಚಿತ್ರ ಹಾಗೂ ಬಿಜೆಪಿ ಧ್ವಜ ಹಿಡಿದು ಘೋಷಣೆ ಕೂಗಿ ಕುಣಿದು ಕುಪ್ಪಳಿಸಿದರು. ಬಳಿ ಮಾತನಾಡಿದ ಹುಡಾ ಮಾಜಿ ಅಧ್ಯಕ್ಷ ನಾಗೇಶ ಕಲಬುರ್ಗಿ,
ಜಗದೀಶ ಶೆಟ್ಟರ ಕಾಂಗ್ರೆಸ್ ಪಕ್ಷ ಸೇರಿದಾಗ ಬಹುತೇಕ ಅವರ ಜೊತೆಗಿದ್ದವರು ಕಾಂಗ್ರೆಸ್ ಸೇರಿದ್ದರು. ಆದರೆ, ಜಗದೀಶ ಶೆಟ್ಟರ ಪ್ರಭಾವವನ್ನು ಅರಿತ ಬಿಜೆಪಿ ಹಿರಿಯ ನಾಯಕರು ಜಗದೀಶ ಶೆಟ್ಟರ ಅವರನ್ನು ಮತ್ತೆ ಬಿಜೆಪಿಗೆ ಕರೆಸಿಕೊಂಡಿದ್ದಾರೆ. ಶೆಟ್ಟರ ಜೊತೆಗೆ ಯಾವೆಲ್ಲ ಕಾರ್ಯಕರ್ತರು ಕಾಂಗ್ರೆಸ್ ಸೇರಿದ್ದರು ಅವರೆಲ್ಲ ಬಿಜೆಪಿಗೆ ವಾಪಸಾಗಲಿದ್ದಾರೆ. ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಜೆ.ಪಿ. ನಡ್ಡಾ, ಅಮಿತ್ ಶಾ ತೋರಿದ ಮರ್ಗದಲ್ಲಿ ಮುನ್ನಡೆಯುತ್ತೇವೆ ಎಂದರು