ಹುಬ್ಬಳ್ಳಿ:ಜಗದೀಶ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿರುವುದು ಖುಷಿಯಾಗಿದೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಜಗದೀಶ ಶೆಟ್ಟರ್ ಪಕ್ಷವನ್ನ ತೊರೆದಿರುವುದು ನಮ್ಮ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ. ಬಿಜೆಪಿಗರಿಗೆ ಸಂತಸವಾಗಿದೆ ಎಂದು ಹೇಳಿದ್ದಾರೆ. ಹೀಗಾಗಿ ನಮಗೂ ಸಂತಸವಾಗಿದೆ. ಶೆಟ್ಟರ್ ಅವರಿಗೆ ನಮ್ಮ ಪಕ್ಷದಲ್ಲಿ ಉತ್ತಮ ಸ್ಥಾನಮಾನ ನೀಡಿದ್ದೆವು. ಆದರೆ ಅವರು ಈ ರೀತಿ ಏಕಾಏಕಿ ಪಕ್ಷ ತೊರೆದಿದ್ದಾರೆ. ಶೆಟ್ಟರ್ ಅವರ ಇತ್ತೀಚಿನ ಬೆಳವಣಿಗೆ ಗಮನಿಸಿದರೆ ಅವರೊಬ್ಬ ಅವಕಾಶವಾದಿಗಳು ಅನ್ನಿಸುತ್ತೆ ಎಂದು ಹೇಳಿದ್ದಾರೆ.
ನಮ್ಮ ಪಕ್ಷದಲ್ಲಿ ಎಲ್ಲ ಸಮುದಾಯದವರೂ ಇದ್ದಾರೆ. ಬಿಜೆಪಿಗೂ ನಮ್ಮ ಪಕ್ಷಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಶೆಟ್ಟರ್ ಅವರ ಮೇಲೆ ನನಗೆ ಅಪಾರ ಗೌರವವಿದೆ. ಆದರೆ ಅವರು ಪಕ್ಷ ಬಿಟ್ಟು ಹೋದದ್ದು ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ. ನಮ್ಮದು ಡಬಲ್ ಡೆಕ್ಕರ್ ಬಸ್ ಎಂದು ಶೆಟ್ಟರ್ ಹೋಗಿರುವುದು ಸಂತೋಷ ಎಂದಿದ್ದಾರೆ