ಬೆಂಗಳೂರು:- ಜೆಡಿಎಸ್ ಗೆ ಮಂಡ್ಯ ಕ್ಷೇತ್ರವೇ ಯಾಕೆ ಬೇಕು!? ಎಂದು ಕೆಸಿ ನಾರಾಯಣಗೌಡ ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರಲ್ಲಿಂದು ಮಂಡ್ಯದ ಪಕ್ಷೇತರ ಸಂಸದೆಯಾಗಿರುವ ಸುಮಲತಾ ಅಂಬರೀಶ್ ಅವರನ್ನು ಭೇಟಿಯಾಗಲು ಬಂದಾಗ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಗೌಡರು, ಮಂಡ್ಯ ಕ್ಷೇತ್ರದಿಂದ ಸುಮಲತಾ ಮೇಡಂ ಅವರೇ ಸ್ಪರ್ಧಿಸಲಿ ಅಂತ ಅವರನ್ನು ಕೋರಲು ಇಲ್ಲಿಗೆ ಬಂದಿದ್ದೇವೆ ಎಂದರು. ಕುಮಾರಸ್ವಾಮಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದು ಮತ್ತು ಅವರನ್ನು ಕೇಂದ್ರದಲ್ಲಿ ಸಚಿವ ಮಾಡುವ ಮಾತುಗಳು ಕೇಳಿಬರುತ್ತಿರೋದು ಸರಿ, ಅದಕ್ಕೆ ತಮ್ಮದೇನೂ ಅಭ್ಯಂತರವಿಲ್ಲ.
ಆದರೆ ಮಂಡ್ಯದಿಂದ ಸುಮಲತಾ ಮೇಡಂ ಅವರೇ ಸ್ಪರ್ಧಿಸಬೇಕು, ಬಿಜೆಪಿ ಟಿಕೆಟ್ ಗಾಗಿ ತಾವು ವರಿಷ್ಠರೊಂದಿಗೆ ಚರ್ಚಿಸುತ್ತೇವೆ ಎಂದು ನಾರಾಯಣ ಗೌಡ ಹೇಳಿದರು.