ನವದೆಹಲಿ: 2024ನೇ ಸಾಲಿನ ಪದ್ಮ ಪ್ರಶಸ್ತಿಗಳಿಗೆ ಆಯ್ಕೆಯಾಗಿರುವವರ ಪಟ್ಟಿ ಗುರುವಾರ ಪ್ರಕಟಗೊಂಡಿದೆ. ಕರ್ನಾಟಕದ 9 ಮಂದಿ ಸೇರಿ ಒಟ್ಟು 132 ಸಾಧಕರನ್ನು ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ.
5 ಜನರಿಗೆ ಪದ್ಮ ವಿಭೂಷಣ, 17 ಜನರಿಗೆ ಪದ್ಮಭೂಷಣ ಹಾಗೂ 110 ಜನರು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ʼಪದ್ಮ’ ಪ್ರಶಸ್ತಿ ಭಾಜನರಾದ 9 ಕನ್ನಡಿಗರು
ಪದ್ಮಭೂಷಣ ಪ್ರಶಸ್ತಿಗೆ ಕನ್ನಡಿಗರಾದ ಸೀತಾರಾಮ್ ಜಿಂದಾಲ್ (ವ್ಯಾಪಾರ ಮತ್ತು ಕೈಗಾರಿಕೆ) ಭಾಜನರಾಗಿದ್ದಾರೆ. ಪದ್ಮಶ್ರೀ ಪ್ರಶಸ್ತಿಗೆ ರೋಹನ್ ಮಾಚಂಡ ಬೋಪಣ್ಣ (ಕ್ರೀಡೆ), ಪ್ರೇಮಾ ಧನರಾಜ್ (ವೈದ್ಯಕೀಯ), ಅನುಪಮಾ ಹೊಸಕೆರೆ (ಕಲೆ), ಶ್ರೀಧರ್ ಮಕಮ್ ಕೃಷ್ಣಮೂರ್ತಿ (ಸಾಹಿತ್ಯ ಮತ್ತು ಶಿಕ್ಷಣ), ಕೆ.ಎಸ್.ರಾಜಣ್ಣ (ಸಾಮಾಜಿಕ ಕಾರ್ಯ), ಚಂದ್ರಶೇಖರ್ ಚನ್ನಪಟ್ಟಣ ರಾಜಣ್ಣಾಚಾರ್ (ವೈದ್ಯಕೀಯ), ಸೋಮಣ್ಣ (ಸಾಮಾಜಿಕ ಕಾರ್ಯ), ಶಶಿ ಸೋನಿ (ವ್ಯಾಪಾರ ಮತ್ತು ಕೈಗಾರಿಕೆ).