ದೆಹಲಿ: ದೆಹಲಿಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ ಸಂಭ್ರಮ ಮನೆ ಮಾಡಿದೆ. ಬೆಳಗ್ಗೆ 10:30ಕ್ಕೆ ದೆಹಲಿಯ ಕರ್ತವ್ಯ ಪಥ್ನಲ್ಲಿ ಪರೇಡ್ ಆರಂಭವಾಗಲಿದೆ.
ವಿಕ್ಷಿತ್ ಭಾರತ್ ಮತ್ತು ಭಾರತ್ – ಲೋಕತಂತ್ರ ಕೀ ಮಾತೃಕಾ ಎಂಬುದು ಈ ವರ್ಷದ ಈ ಸಲದ ಪರೇಡ್ ಆಗಿದೆ. ಪರೇಡ್ನಲ್ಲಿ ಈ ಸಲ 95 ಸದಸ್ಯ ಮೆರವಣಿಗೆಯ ತುಕಡಿ ಮತ್ತು 33 ಸದಸ್ಯ ಬ್ಯಾಂಡ್ ತುಕಡಿಗಳಿವೆ. ಸುಮಾರು 90 ನಿಮಿಷಗಳವರೆಗೆ ಪರೇಡ್ ನಡೆಯಲಿದೆ.
ಗಣರಾಜ್ಯೋತ್ಸವ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ಭದ್ರತೆ ಕೈಗೊಳ್ಳಲಾಗಿದೆ. ದೆಹಲಿಯಲ್ಲಿ ಸೇನೆ, ಖಾಕಿ ಕೋಟೆಯೇ ನಿರ್ಮಾಣವಾಗಿದೆ. ಡ್ರೋನ್ಗಳ ಹಾರಾಟವನ್ನು ನಿಷೇಧಿಸಲಾಗಿದೆ. ಕಟ್ಟಡಗಳ ಮೇಲೆ ಶಾರ್ಪ್ಶೂಟರ್ಗಳನ್ನು ನಿಯೋಜಿಸಲಾಗಿದೆ. ಎಲ್ಲೆಲ್ಲೂ ಸಿಸಿಟಿವಿ ಕಣ್ಗಾವಲು ಇರಿಸಲಾಗಿದೆ. ಕಾರ್ಯಕ್ರಮಕ್ಕೆ ಬರೋರಿಗೆ, ತಿಂಡಿ, ನೀರಿನ ಬಾಟಲ್, ಗನ್, ಚಾಕು, ಚೂಪಾದವಸ್ತುಗಳು, ಕೊಡೆ, ಕಪ್ಪುವಸ್ತ್ರ, ಕ್ಯಾಮರಾ, ರೇಡಿಯೋ, ಸ್ಯೂಟ್ಕೇಸ್, ಬ್ಯಾಗ್, ಸಿಗರೇಟ್, ಬೀಡಿ, ಬೆಂಕಿಪೊಟ್ಟಣ, ಅಗ್ನಿಕಾರಕ ವಸ್ತುಗಳನ್ನು ನಿಷೇಧಿಸಲಾಗಿದೆ.
ಈಗಾಗಲೇ ಭಾರತಕ್ಕೆ ಬಂದಿಳಿದಿರುವ ಫ್ರೆಂಚ್ ಅಧ್ಯಕ್ಷ ಇಮ್ಯಾನುಯಲ್ ಮ್ಯಾಕ್ರಾನ್ 75ನೇ ಗಣರಾಜ್ಯೋತ್ಸವ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿದ್ದಾರೆ. ಇದಲ್ಲದೆ ದೇಶ ವಿದೇಶಗಳ 13 ಸಾವಿರ ಅತಿಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಒಟ್ಟು 70 ಸಾವಿರ ಆಸನದ ವ್ಯವಸ್ಥೆ ಮಾಡಲಾಗಿದೆ. ಇದರಲ್ಲಿ ಸಾರ್ವಜನಿಕರಿಗಾಗಿ 42 ಸಾವಿರ ಆಸನಗಳನ್ನು ಮೀಸಲಿರಿಸಲಾಗಿದೆ.