ಶಹಾಪುರ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ಪ್ರಯತ್ನಕ್ಕೆ ರಾಜ್ಯ ಸರ್ಕಾರ ಇಳಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಆರೋಪಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಕೆರೆಗೂಡು ಗ್ರಾಮದ ಪಂಚಾಯ್ತಿಯಲ್ಲಿ ಎಲ್ಲಾ ಸದಸ್ಯರು ಒಟ್ಟಿಗೆ ಚರ್ಚಿಸಿ, ತೀರ್ಮಾನ ಮಾಡಿ 108 ಅಡಿ ಧ್ವಜದ ಸ್ತಂಭ ನಿರ್ಮಿಸಿ, ಹನುಮಾನ್ ಧ್ವಜ ಹಾರಿಸಬೇಕೆಂದುಕೊಂಡಿದ್ದರು.
Home Loan: ನೀವು ಮನೆ ಖರೀದಿಗೆ ಯೋಚಿಸುತ್ತಿದ್ದೀರಾ.? ಈ ಬ್ಯಾಂಕ್ʼಗಳಲ್ಲಿ ಸಿಗುತ್ತೆ ಕಡಿಮೆ ಬಡ್ಡಿಗೆ ಗೃಹ ಸಾಲ..!
ಏಕಾಏಕಿ ಪೊಲೀಸರು ಗ್ರಾಮಕ್ಕೆ ನುಗ್ಗಿ ಲಾಠಿ ಚಾರ್ಚ್ ಮಾಡಿ, ಏರಿಸಿದ ಧ್ವಜವನ್ನು ಇಳಿಸಿರುವುದು ಖಂಡನಿಯ ಎಂದರು. ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಪೊಲೀಸರ ಮೂಲಕ ಗೂಂಡಾಗಿರಿ ಮಾಡುತ್ತಿದೆ. ಪೊಲೀಸರು ಗ್ರಾಮಸ್ಥರ ಮೇಲೆ ಲಾಠಿ ಚಾರ್ಚ್ ಮಾಡಿದ್ದಾರೆ. ವಿರೋಧ ಪಕ್ಷದ ನಾಯಕ ಆರ್. ಅಶೋಕ ಮತ್ತು ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ ಅವರು ಭೇಟಿ ನೀಡಿದ್ದ ವೇಳೆ ಮತ್ತೊಮ್ಮೆ ಗ್ರಾಮಸ್ಥರ ಮೇಲೆ ಲಾಠಿ ಚಾಜ್ ಮಾಡಿ ಅವರನ್ನು ಬಂಧಿಸಿರುವುದು ಸರಿಯಲ್ಲ ಎಂದರು.