ದಾವಣಗೆರೆ: ಕೆರಗೋಡಿನಲ್ಲಿನ ಘಟನೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿತು. ದಾವಣಗೆರೆ ಜಿಲ್ಲಾ ಬಿಜೆಪಿ ಕಚೇರಿಯಿಂದ ಎಸಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಹಿಂದು ವಿರೋಧಿ ನಡೆ ಅನುಸರಿಸುತ್ತಿದೆ ಎಂದು ಮಾಜಿ ಸಚಿವರಾದ ಎಸ್ ಎ ರವೀಂದ್ರನಾಥ್, ಎಂ ಪಿ ರೇಣುಕಾಚಾರ್ಯ, ಶಾಸಕ ಬಿ ಪಿ ಹರೀಶ್, ಜಿಲ್ಲಾಧ್ಯಕ್ಷ ರಾಜಶೇಖರ ನೇತೃತ್ವದಲ್ಲಿ ದಾವಣಗೆರೆಯ ಕೆ ಬಿ ಬಡಾವಣೆಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿ ಎದುರು ದಿಕ್ಕಾರ ಕೂಗಿದರು.