ಬೆಂಗಳೂರು: ನಗರದ ಸರ್ವತೋಮುಖ ಅಭಿವೃದ್ಧಿಯ ಹಿತ ದೃಷ್ಟಿಯಿಂದ ಕೆಲವು ವಿಷಯಗಳನ್ನು ಚರ್ಚಿಸಲು ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರನ್ನು ಪರಿಷತ್ ಶಾಸಕರಾದ ಟಿ ಎ ಶರವಣ ಅವರು ಭೇಟಿ ಮಾಡಿದರು.
ನಗರದ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಟಿ.ಎ,ಶರವಣ ಅವರು, ಬೆಂಗಳೂರು ನಗರದ ಸರ್ವತೋಮುಖ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿದರು. ನಗರಾಭಿವೃದ್ಧಿ ಸಚಿವರಾಗಿರುವ ಡಿ.ಕೆ.ಶಿವಕುಮಾರ್ ಅವರು ಈ ಹಿನ್ನೆಲೆಯಲ್ಲಿ ಭೂಕಬಳಿಕೆ, ಸಂಚಾರ ದಟ್ಟನೆಯ ಸುವ್ಯವಸ್ಥೆ ಸೇರಿದಂತೆ ಹಲವು ವಿಚಾರಗಳನ್ನು ಚರ್ಚಿಸಲಾಯಿತು,
ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಟಿ ಎ ಶರವಣ ಅವರು ಉಪಮುಖ್ಯಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಭೂಕಬಳಿಕೆ,ಸಂಚಾರ ದಟ್ಟನೆಯ ಸುವ್ಯವಸ್ಥೆ, ಕರ್ನಾಟಕದಲ್ಲಿ ಕನ್ನಡ ಬೋರ್ಡ್ ಗಳ ಬಳಕೆಯ ಕುರಿತಂತೆ, ಬೆಂಗಳೂರಿನ ರಸ್ತೆ ನಿರ್ವಹಣೆಗೆ ಕಾಯ್ದೆಗಳ ತಿದ್ದುಪಡಿ , ಸಾರ್ವಜನಿಕರ ಕುಂದು ಕೊರತೆಗಳ ಕುರಿತು ಮತ್ತು ಹಲವಾರು ವಿಷಯಗಳ ಬಗ್ಗೆ ಚರ್ಚಿಸಿ, ಪತ್ರದ ಮುಖೇನ ಸಲಹೆ ನೀಡಿದರು.