ಚಾಮರಾಜನಗರ: ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿ ಭಗವಾಧ್ವಜ ತೆರವು ಪ್ರಕರಣ ಖಂಡಿಸಿ ಗಡಿಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಚಾಮರಾಜನಗರದ ಚಾಮರಾಜೇಶ್ವರ ದೇವಸ್ಥಾನದ ಆವರಣದಿಂದ ಭುವನೇಶ್ವರಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿ ಕಾರ್ಯಕರ್ತರು,
ರಾಷ್ಟ್ರೀಯ ಹೆದ್ದಾರಿಯಲ್ಲಿ ಧರಣಿ ಕುಳಿತು ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸಿಎಸ್ ನಿರಂಜನ್, ಮಾಜಿ ಸಚಿವ ಎನ್ ಮಹೇಶ್, ಮಾಜಿ ಶಾಸಕ ಬಾಲರಾಜ್, ಬಿಜೆಪಿ ಎಸ್ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಭಾರ್ಗವಿ ದ್ರಾವಿಡ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲೆಯ ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾಗಿಯಾಗಿದ್ದರು..