ಮಂಡ್ಯ:-ಕೆರೆಗೋಡು ಹನುಮ ಧ್ವಜ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಡಿಓ ಸಸ್ಪೆಂಡ್ ಮಾಡಲಾಗಿದೆ.
ಕೆರಗೋಡು ಹನುಮ ಧ್ವಜ ಪ್ರಕರಣದಲ್ಲಿ ಕೆರಗೋಡು ಗ್ರಾಮ ಪಂಚಾಯತಿಯ ಪಿಡಿಓ ತಲೆದಂಡವಾಗಿದೆ. ಪಿಡಿಓ ಜೀವನ್ ಬಿ.ಎಂ ಅವರನ್ನು ಐದು ಕಾರಣ ನೀಡಿ ಅಮಾನತು ಮಾಡಲಾಗಿದೆ.
ಮಂಡ್ಯ ಜಿಲ್ಲಾ ಪಂಚಾಯತ್ ಸಿಇಓ ತನ್ವೀರ್ ಆಶೀಫ್ ಸೇಠ್ ಪಿಡಿಓ ಅವರನ್ನು ಅಮಾನತು ಪಡಿಸಿ ಆದೇಶ ಹೊರಡಿಸಿದ್ದಾರೆ. ಗ್ರಾಪಂ ಸ್ವತ್ತನ್ನು ಖಾಸಗಿಯವರಿಗೆ ನೀಡುವುದಕ್ಕೆ ಸರ್ಕಾರದ ಅನುಮತಿ ಕಡ್ಡಾಯ. ಈ ಪ್ರಕರಣದಲ್ಲಿ ನಿಯಮ ಉಲ್ಲಂಘಿಸಿ ಖಾಸಗಿಯವರಿಗೆ ನೀಡಲಾಗಿದೆ. ಕೆರಗೋಡು ಗ್ರಾಮದಲ್ಲಿ ನಡೆದ ಸಂಘರ್ಷಕ್ಕೆ ಪಿಡಿಓ ನೇರ ಕಾರಣವಾಗಿದ್ದಾರೆ. ಧ್ವಜ ಸ್ತಂಭ ನಿರ್ಮಾಣಕ್ಕೆ ಅನುಮತಿ ನೀಡಿ ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಅಮಾನತು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಇಷ್ಟೇ ಅಲ್ಲದೇ ಧ್ವಜ ಸ್ತಂಭದಲ್ಲಿ ರಾಷ್ಟ್ರೀಯ ಧ್ವಜ ಹಾರಿಸಲು ಅನುಮತಿ ನೀಡಿ, ಷರತ್ತು ಉಲ್ಲಂಘಿಸಿದ್ದರೂ ಕ್ರಮಕೈಗೊಳ್ಳದೆ ಪಿಡಿಓ ನಿರ್ಲಕ್ಷವಹಿಸಿದ್ದಾರೆ. ರಾಷ್ಟ್ರ ಧ್ವಜದ ಬದಲು ಹನುಮ ಧ್ವಜ ಹಾರಿಸಲು ಅವಕಾಶ ನೀಡಿರುವುದು ಹಾಗೂ ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡಿಲ್ಲ ಎಂಬ ಕಾರಣ ನೀಡಿ ಪಿಡಿಓ ಅವರನ್ನು ಅಮಾನತು ಮಾಡಿ ಆದೇಶ ಹೊಡಿಸಲಾಗಿದೆ.