ಬೆಂಗಳೂರು:- ಬಿಬಿಎಂಪಿ 2024-25ನೇ ಸಾಲಿನ ಆಯವ್ಯಯ ಮಂಡನೆಗೆ ಬಿಬಿಎಂಪಿ ಅಧಿಕಾರಿಗಳಿಂದ ಭರ್ಜರಿ ತಯಾರಿ ನಡೆದಿದೆ.
ಫೆಬ್ರವರಿ 16ರಂದು ರಾಜ್ಯ ಸರ್ಕಾರದಿಂದ ಆಯವ್ಯಯ ಮಂಡನೆ ಆಗಲಿದೆ. ಈ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗಾಗಿ 8050 ಕೋಟಿ ರೂ ಅನುದಾನ ಅಪೇಕ್ಷಿಸಿದ್ದು ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಿದೆ.ಸಂಚಾರ ದಟ್ಟಣೆ ನಿವಾರಣೆ ಸಲುವಾಗಿ ಸುರಂಗ ರಸ್ತೆ ನಿರ್ಮಾಣ ಕಾರ್ಯ, ಇಂದಿರಾ ಕ್ಯಾಂಟೀನ್ಗಳ ಸಮರ್ಪಕ ಕಾರ್ಯ ನಿರ್ವಹಣೆ ಸೇರಿದಂತೆ ಇನ್ನಿತರೆ ಮೂಲ ಸೌಕರ್ಯಗಳಿಗೆ ಅಗತ್ಯ ಅನುದಾನ ಒದಗಿಸುವಂತೆ ಈ ಪ್ರಸ್ತಾವನೆಯಲ್ಲಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ.
ಸಂಚಾರ ದಟ್ಟಣೆ, ಕಸ, ರಸ್ತೆ ಗುಂಡಿ, ಕುಡಿಯುವ ನೀರು ಸೇರಿದಂತೆ ಇನ್ನಿತರೆ ಮೂಲಸೌಕರ್ಯ ಸಮಸ್ಯೆಗಳ ವಿರುದ್ಧ ಸೆಣಸುತ್ತಲೇ ಇರುವ ಬಿಬಿಎಂಪಿಯು, ರಾಜ್ಯ ಸರಕಾರದ 2024-25ನೇ ಸಾಲಿನ ಆಯವ್ಯಯದಲ್ಲಿ8050 ಕೋಟಿ ರೂಪಾಯಿ ಅನುದಾನ ಅಪೇಕ್ಷಿಸಿದೆ.
ರಾಜ್ಯ ಸರಕಾರವು ಫೆ.16ರಂದು ಬಜೆಟ್ ಮಂಡಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜಧಾನಿಯ ಅಭಿವೃದ್ಧಿಗೆ ಪಾಲಿಕೆಯು 8050 ಕೋಟಿ ರೂಪಾಯಿ ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಿದೆ. ಸಂಚಾರ ದಟ್ಟಣೆ ನಿವಾರಣೆಗೆ ಸುರಂಗ ರಸ್ತೆ ನಿರ್ಮಾಣ, ಕಸ, ರಸ್ತೆ ಗುಂಡಿ ಸಮಸ್ಯೆ ನಿವಾರಣೆ, ಇಂದಿರಾ ಕ್ಯಾಂಟೀನ್ಗಳ ಸಮರ್ಪಕ ಕಾರ್ಯ ನಿರ್ವಹಣೆ ಸೇರಿದಂತೆ ಇನ್ನಿತರೆ ಮೂಲಸೌಕರ್ಯಗಳಿಗೆ ಅನುದಾನ ಒದಗಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ.