ವಿಜಯಪುರ:- ಡಿಡಿಪಿಐ ಹಾಗೂ ಇಬ್ಬರು ಹಿರಿಯ ಉಪನ್ಯಾಸಕರನ್ನು IEDSS ಯೋಜನೆ ಅನುಷ್ಠಾನದ ವೇಳೆ ಕರ್ತವ್ಯ ನಿರ್ಲಕ್ಷ್ಯ ಆರೋಪ ಹಿನ್ನೆಲೆ ಸಸ್ಪೆಂಡ್ ಮಾಡಲಾಗಿದೆ.
ಡಿಡಿಪಿಐ ಎನ್.ಹೆಚ್.ನಾಗೂರ ಹಾಗೂ ಡಯಟ್ನ ಹಿರಿಯ ಉಪನ್ಯಾಸಕರಾದ ಎಸ್.ಎ.ಮುಜಾವರ ಮತ್ತು ಎ.ಎಸ್.ಹತ್ತಳ್ಳಿ ಅವರನ್ನು ವಿಚಾರಣೆ ಕಾಯ್ದಿರಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
2009-10 ಹಾಗೂ 2011-12ರಲ್ಲಿ ಅನುದಾನ ದುರುಪಯೋಗ ಆರೋಪ ಮಾಡಲಾಗಿದೆ. ಸ್ವಯಂ ಸೇವಾ ಸಂಸ್ಥೆಗಳಿಗೆ ಅನುದಾನ ಬಿಡುಗಡೆಗೆ ಅಧಿಕಾರಿಗಳಿಂದ ಶಿಫಾರಸು ಮಾಡಿದ್ದಾರೆ. ನಿಯಮಬಾಹಿರವಾಗಿ ಅಸ್ತಿತ್ವದಲ್ಲಿರದ ಎನ್ಜಿಒಗಳಿಗೆ ಹಣ ಬಿಡುಗಡೆ ಆರೋಪ ಮಾಡಲಾಗಿದ್ದು, ಸರ್ಕಾರದ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನರಿಂದ ಸಸ್ಪೆಂಡ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.