ನವದೆಹಲಿ: ಅಮಾನತುಗೊಂಡ ಸಂಸತ್ ಸದಸ್ಯರ ಅಮಾನತು ಹಿಂಪಡೆಯಲು ಸಭಾಧ್ಯಕ್ಷರು ಮತ್ತು ಸಭಾಪತಿಗಳಿಗೆ ಸರ್ಕಾರದ ಪರವಾಗಿ ಮನವಿ ಮಾಡಿದ್ದೇವೆ ಎಂದು ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ತಿಳಿಸಿದರು.
ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಬಂಧಪಟ್ಟ ವಿಶೇಷಾಧಿಕಾರ ಸಮಿತಿಯೊಂದಿಗೆ ಚರ್ಚಿಸಿ ಅಮಾನತುಗೊಂಡಿರುವ ಎಲ್ಲಾ ಸದಸ್ಯರ ಅಮಾನತು ಹಿಂಪಡೆಯುವಂತೆ ಸರ್ಕಾರದ ಪರವಾಗಿ ಕೋರಲಾಗಿದೆ ಎಂದು ಹೇಳಿದರು.
Congress Guarantee: ಬಿಗ್ ಶಾಕ್.! 5 ಉಚಿತ ಗ್ಯಾರಂಟಿ ಕ್ಯಾನ್ಸಲ್: ಕೈ ಶಾಸಕನ ಸ್ಫೋಟಕ ಹೇಳಿಕೆ
INDIA ಮೈತ್ರಿ ಬ್ರೈನ್ ಡೆಡ್ ಸ್ಥಿತಿಯಲ್ಲಿದೆ. ಕಾಂಗ್ರೆಸ್ ನ ಜಗಳದಿಂದಲೇ ಅದರ ಮಿತ್ರ ಪಕ್ಷಗಳೊಂದಿಗಿನ ಮೈತ್ರಿ ಅಂತ್ಯ ಕಂಡಿದೆ ಎಂದು ಸಚಿವ ಜೋಶಿ ಲೇವಡಿ ಮಾಡಿದರು. ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳ ನಡುವಿನ ಮೈತ್ರಿ ಹೋರಾಟ ಅಂತ್ಯ ಕಂಡಿದೆ. ಈಗಾಗಲೇ ಸಂಪೂರ್ಣ ಮುರಿದು ಬಿದ್ದಿದೆ ಎಂದು ಹೇಳಿದರು.
ಇದು ಅಸ್ವಾಭಾವಿಕ ಮೈತ್ರಿ. ಫೋಟೋಶೂಟ್ಗೆ ಸೀಮಿತ ಎಂದು ಹಿಂದೆಯೇ ಹೇಳಿದ್ದೇವೆ. ಇದೀಗ ಅದರ ಬ್ರೈನ್ ಡೆಡ್ ಆಗಿದೆ. INDIA ಮೈತ್ರಿ ಬೇಗ ಸಾಯುವುದು ಖಚಿತ ಎಂದು ಜೋಶಿ ಹೇಳಿದರು. ಮೈತ್ರಿ ಪಕ್ಷಗಳೊಂದಿಗೆ ಹೊಡೆದಾಡಿಕೊಂಡು ಒಡೆಯುವುದು ಕಾಂಗ್ರೆಸ್ನ ಸ್ವಭಾವ. ಹಾಗಾಗಿಯೇ ಅದು ಕೊನೆಗಂಡಿದೆ ಎಂದು ಆರೋಪಿಸಿದರು.