ಬೆಂಗಳೂರು: ಬಡಜನರ ಬಾಳಿನ ಆಶಾಕಿರಣರಾದ ಜಯದೇವ ಆಸ್ಪತ್ರೆ (Jayadeva Hospital) ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಮಂಜುನಾಥ್ ಅವರು ಇಂದು (ಬುಧವಾರ) ನಿವೃತ್ತರಾಗಲಿದ್ದಾರೆ.
ಹೃದ್ರೋಗಿಗಳ ಪಾಲಿನ ಹೃದಯವಂತ ಡಾಕ್ಟರ್ ಮಂಜುನಾಥ್ ಅವರ ನಿವೃತ್ತಿ ಜೀವನ ಸುಖ ಸಂತೋಷದಿಂದಿರಲಿ. ನಿಮ್ಮ ಸಮಾಜ ಸೇವೆ ಮುಂದುವರಿಯಲಿ ಎಂದು ಪರಿಷತ್ ಸದಸ್ಯ ಟಿ.ಎ.ಶರವಣ ತಿಳಿಸಿದ್ದಾರೆ.
ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾಗಿ 16 ವರ್ಷಗಳ ಕಾಲ ಸೇವೆ ಸಲ್ಲಿಸಿ ಇಂದು ನಿವೃತ್ತರಾಗುತ್ತಿರುವ ನಾಡಿನ ಪ್ರಖ್ಯಾತ ವೈದ್ಯರಾದ ಡಾ.ಸಿ.ಎನ್.ಮಂಜುನಾಥ್ ಅವರ ನಿವೃತ್ತಿ ಜೀವನ ಸುಖಕರವಾಗಿರಲೆಂದು ಮನಸಾರೆ ಶುಭ ಹಾರೈಸುತ್ತೇನೆ ಎಂದಿದ್ದಾರೆ.
ಲಕ್ಷಾಂತರ ಹೃದ್ರೋಗಿಗಳ ಪಾಲಿಗೆ ಸಾಕ್ಷಾತ್ ಮಂಜುನಾಥನಂತೆ ಕಂಡವರು ಜಯದೇವದ ಡಾ. ಸಿ.ಎನ್ ಮಂಜುನಾಥ್. ಆರೋಗ್ಯ ಕ್ಷೇತ್ರದಲ್ಲಿ ಸೇವಾ ಮನೋಭಾವ ಬಹಳ ಮುಖ್ಯ. ಮಾನವೀಯತೆಯನ್ನೇ ಆಧಾರವಾಗಿಟ್ಟುಕೊಂಡು ಜಯದೇವ ಸಂಸ್ಥೆಯನ್ನ ಇಷ್ಟು ದೊಡ್ಡಮಟ್ಟಕ್ಕೆ ಬೆಳೆಸಿದ್ದಾರೆ. ಅವರ ನಿವೃತ್ತಿ ಜೀವನ ಸುಖ ಸಂತೋಷದಿಂದಿರಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.