ದಾವಣಗೆರೆ:- ಲೋಕಸಭೆ ಚುನಾವಣೆಯಲ್ಲಿ ಪಂಚಮಸಾಲಿಗಳಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಬೇಕು ಎಂದು ಕಾಂಗ್ರೆಸ್ ಹಾಗೂ ಬಿಜೆಪಿಗೆ ವಚನಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ.
ಪೀಠದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳ ಜತೆ ವಚನಾನಂದ ಶ್ರೀ ಸುದ್ದಿಗೋಷ್ಠಿ ನಡೆಸಿ ಹೇಳಿಕೆ ನೀಡಿದ್ದಾರೆ.
ಲೋಕ ಚುನಾವಣೆಯಲ್ಲಿ ಪಂಚಮಸಾಲಿ ಸಮುದಾಯಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಬೇಕು. ದಾವಣಗೆರೆಯಿಂದ ಬಾಗಲಕೋಟೆ, ವಿಜಯಪುರ, ಗದಗ ಬೆಳಗಾವಿ, ಸೇರಿದಂತೆ ಉತ್ತರ ಕರ್ನಾಟಕದಲ್ಲಿ ನಮ್ಮವರೆ ಹೆಚ್ಚಾಗಿದ್ದಾರೆ. ಲಿಂಗಾಯತರಲ್ಲಿ ಅತಿ ಹೆಚ್ಚಿರುವುದು ಪಂಚಮಸಾಲಿ ಸಮುದಾಯ. ಸುಮಾರು 80 ಲಕ್ಷಕ್ಕೂ ಹೆಚ್ಚು ಸಮುದಾಯವಿದೆ. ಇತ್ತೀಚಿನ ದಿನಗಳಲ್ಲಿ ಅವರಿಗೆ ರಾಜಕೀಯವಾಗಿ ಮಾನ್ಯತೆ ಸಿಕಿಲ್ಲ.
ಹೀಗಾಗಿ, ಲೋಕಸಭೆ ಚುನಾವಣೆಯಲ್ಲಿ ಸಾಮಾಜಿಕ ನ್ಯಾಯ ಸಿಗಬೇಕು. ಈ ಕೆಲಸವನ್ನ ಎರಡು ರಾಷ್ಟ್ರೀಯ ಪಕ್ಷಗಳು ಮಾಡಬೇಕು. ಯಾವ ಕ್ಷೇತ್ರಕ್ಕೆ ಕೊಡ್ತಾರೋ, ಯಾವ ವ್ಯಕ್ತಿಗೆ ಕೊಡ್ತಾರೋ ಅದು ಪಕ್ಷಕ್ಕೆ ಬಿಟ್ಟಿದ್ದು, ಪಕ್ಷಕ್ಕೆ ನಿಷ್ಠರಿದ್ದವರಿಗೆ ಯೋಗ್ಯರಿಗೆ ಟಿಕೆಟ್ ನೀಡಲಿ. ನಮ್ಮ ಸೋದರ ಸಮುದಾಯಗಳು ಜನಸಂಖ್ಯೆ ಕಡಿಮೆ ಇದ್ದರೂ ಹೆಚ್ಚಿನ ಪಾಲನ್ನ ಪಡೆಯುತ್ತಿದ್ದಾರೆ.
ನಮ್ಮ ಸಮುದಾಯ ಕೇವಲ ಮತಕ್ಕೆ ಮಾತ್ರ ಸೀಮಿತವಾದಂತಿದೆ. ಹೀಗಾಗಿ, ನಮ್ಮ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಸಿಗಬೇಕು. ಅದಕ್ಕಾಗಿಯೇ ಸುದ್ದಿಗೋಷ್ಠಿ ಕರೆದಿದ್ದೇವೆ. ಒಟ್ಟಿನಲ್ಲಿ ನಮ್ಮ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯ ಬೇಕು. ಇದರಲ್ಲಿ ಹರಿಹರ ಪೀಠ ಬೇರೆ ಪೀಠದ ವ್ಯಕ್ತಿಯ ಮಾತಿಲ್ಲ. ಪಂಚಮಸಾಲಿ ಸಮುದಾಯದ ವ್ಯಕ್ತಿಗೆ ನೀಡಬೇಕು. ಎರಡು ಪಕ್ಷಗಳು ನಮ್ಮ ಸಮಾಜದ ವ್ಯಕ್ತಿಗಳಿಗೆ ನೀಡಿದರೆ ನಾವೇ ಹೊಂದಾಣಿಕೆ ಮಾಡಿಕೊಳ್ಳುತ್ತೇವೆ. ಯಾರಾದರೂ ಒಬ್ಬ ವ್ಯಕ್ತಿಯನ್ನ ಗೆಲ್ಲಿಸುತ್ತೇವೆ. ಕೂಡಲ ಸಂಗಮ ಪೀಠದ ಭಕ್ತರಿಗೆ ಕೊಟ್ಟರೂ ಓಕೆ ನಾವು ಸಪೋರ್ಟ್ ಮಾಡುತ್ತೇವೆ ಎಂದರು.