ರಾಂಚಿ:- ಹೇಮಂತ್ ಸೋರೆನ್ ಅರೆಸ್ಟ್ ಹಿನ್ನೆಲೆ ಚಂಪಾಯಿ ಸೋರೆನ್ ಮುಂದಿನ ಜಾರ್ಖಂಡ್ ಸಿಎಂ ಆಗಿ ಆಯ್ಕೆ ಆಗಿದ್ದಾರೆ.
ರಾಜ್ಯಪಾಲರನ್ನು ಭೇಟಿ ಮಾಡಿರುವ ಆಡಳಿತ ಪಕ್ಷದ ಶಾಸಕರು, ಚಂಪಾಯಿ ಸೋರೆನ್ರನ್ನು ಮುಖ್ಯಮಂತ್ರಿ ಮಾಡುವಂತೆ ಮನವಿ ಮಾಡಿದ್ದಾರೆ. ಗುರುವಾರ ಚಂಪಾಯಿ ಸೋರೇನ್ ಸಿಎಂ ಆಗಿ ಅಧಿಕಾರ ಸ್ವೀಕರಿಸುವ ಸಂಭವ ಇದೆ.
ಇನ್ನೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಮಂತ್ ಸೋರೆನ್ ಅವರನ್ನು ಬುಧವಾರ ಸಂಜೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ.