ನವದೆಹಲಿ: ಸರ್ಕಾರವು ಕೈಗಾರಿಕೆ ಮತ್ತು ಕೃಷಿ ದೇಶದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡುತ್ತಿದೆ. ರೈತರಿಗೆ ರಸಗೊಬ್ಬರ ಹಾಗೂ ಇತರೆ ಅಗತ್ಯ ವಸ್ತುಗಳನ್ನು ನೀಡುತ್ತಿದೆ. ರೈತರಿಗಾಗಿ ಅನೇಕ ವಿಷಯಗಳಲ್ಲಿ ಸಹಾಯಧನ ನೀಡುತ್ತಿದೆ. ಅವರನ್ನು ಆರ್ಥಿಕವಾಗಿ ಬಲಪಡಿಸಲು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ನೀಡಲಾಗುತ್ತಿದೆ. ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ಇಂದು ನೂರಾರು ಯೋಜನೆಗಳು ನಡೆಯುತ್ತಿವೆ ಎಂದು ವಿತ್ತ ಮಂತ್ರಿ ತಿಳಿಸಿದರು.
ಇಂದು ಉದ್ಯೋಗ ಪಡೆಯುವ ಬದಲು ಜನರು ಉದ್ಯೋಗ ನೀಡುತ್ತಿದ್ದಾರೆ. ಇಂದು ಹೆಚ್ಚಿನ ಯುವಕರು ಉದ್ಯೋಗದಾತರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವೂ ಸಾಕಷ್ಟು ಕೆಲಸ ಮಾಡುತ್ತಿದೆ. ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುತ್ತಿದೆ. ಇಂತಹ ಹಲವು ವೇದಿಕೆಗಳನ್ನು ಸಣ್ಣ ಕೈಗಾರಿಕೆಗಳಿಗೆ ಒದಗಿಸಲಾಗುತ್ತಿದ್ದು, ಇದರಿಂದ ಅವು ವಿಶ್ವದರ್ಜೆಯಾಗುತ್ತವೆ ಎಂದರು.
ದೇಶದ ಕಟ್ಟಕಡೆಯ ವ್ಯಕ್ತಿಗೂ ಅನುಕೂಲ ಕಲ್ಪಿಸುವುದು ನಮ್ಮ ಉದ್ದೇಶವಾಗಿದೆ. ಇದಕ್ಕಾಗಿ ಕಳೆದ 10 ವರ್ಷಗಳಿಂದ ಶ್ರಮಿಸುತ್ತಿದ್ದೇವೆ. ಕೇಂದ್ರದ ನರೇಂದ್ರ ಮೋದಿ ಸರ್ಕಾರ ಜನರ ಅಭಿವೃದ್ಧಿಗಾಗಿ ಲಕ್ಷ ಕೋಟಿಗಳ ಯೋಜನೆಗಳನ್ನು ಜಾರಿಗೆ ತಂದಿದೆ. ಇವುಗಳನ್ನು ಮುಂದೆಯೂ ಮುಂದುವರಿಸಲಿದೆ ಎಂದು ಹೇಳಿದರು.