ಬಳ್ಳಾರಿ:- ಮಾಜಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ರಾಜ್ಯದಲ್ಲಿ ಅಲ್ಲ ಇಡೀ ದೇಶದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದಿಲ್ಲ ಎಂದರು.
ಕರ್ನಾಟಕ, ತಮಿಳುನಾಡು ಮತ್ತು ಕೇರಳದಲ್ಲಿ ಕಳೆದ ಬಾರಿ ಬೋನಸ್ ಅಗಿ ಒಂದೆರಡು ಕ್ಷೇತ್ರ ಗೆದ್ದಿದ್ದರು. ಈಗ ಅದು ಕೂಡ ಗೆಲ್ಲೋದಿಲ್ಲ ಎಂದರು.
ಆರಂಭದಲ್ಲಿ ಇಂಡಿಯಾ ಒಕ್ಕೂಟ ದೊಡ್ಡ ಸೌಂಡ್ ಮಾಡಿತ್ತು. ಒಂದು ಮತ್ತು ಎರಡನೇಯ ಮೀಟಿಂಗ್ ದೊಡ್ಡ ಸೌಂಡ್ ಮಾಡಿತ್ತು. ಮೂರನೇ ಮೀಟಿಂಗ್ ಡಮಾರ್ ಅಯಿತು. ದೇಶದಲ್ಲಿ ರಾಮಮಂದಿರ ನಿರ್ಮಾಣದ ಬಳಿಕ ಸರ್ವಂ ರಾಮಮಯಂ ಆಗಿದೆ. ಲೋಕಸಭೆಯಲ್ಲಿ 400 ಸ್ಥಾನ ಗೆದ್ದೇ ಗೆಲ್ಲುತ್ತೇವೆಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಮ ರಾಮ ರಾಮ ದೇಶದ ಎಲ್ಲೆಡೆ ರಾಮಮಯ ಹೆಚ್ಚಾಗಿದೆ. ಹೀಗಾಗಿ ಇದೀಗ ಸಿದ್ದರಾಮಯ್ಯ ಅವರಿಗೆ ಜೈಶ್ರೀರಾಂ ಅನ್ನೋ ಹಾಗೇ ಅಯಿತು. 40 ವರ್ಷದ ರಾಜಕಾರಣದಲ್ಲಿ ರಾಮಮಂದಿರ ಕಟ್ಟಬೇಕೆಂದು ಒಮ್ಮೆಯೂ ಹೇಳಿಲ್ಲ. ಸಿದ್ದರಾಮಯ್ಯ ಬಾಯಿಯಲ್ಲಿ ಜೈಶ್ರೀರಾಂ ಬಂದಿದೆ. ಅಂದರೆ ಕಾಂಗ್ರೆಸ್ ನವರಿಗೆ ಗೊತ್ತಾಗಿದೆ ಬಿಜೆಪಿ ಗೆಲ್ಲುತ್ತದೆ ಎಂದು ಹೇಳಿದರು.