ಹಾವೇರಿ:- ಹಾವೇರಿಗೆ ಆಗಮಿಸಿದ ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ಭರ್ಜರಿ ಸ್ವಾಗತ ಸಿಕ್ಕಿದೆ. ಹಾವೇರಿ ಜಿಲ್ಲೆಯ ಬಿಜೆಪಿ ಮುಖಂಡರು , ಕಾರ್ಯಕರ್ತರು ಬೈಕ್ ರ್ಯಾಲಿ ಮೂಲಕ ಅದ್ದೂರಿಯಾಗಿ ಸ್ವಾಗತ ಕೋರಲಾಗಿದೆ.
ಹಾವೇರಿ ಜಿಲ್ಲಾದ್ಯಕ್ಷ ಅರುಣ್ ಕುಮಾರ್ ಪೂಜಾರ್ ಪದ ಗ್ರಹಣ ಕಾರ್ಯಕ್ರಮ ಹಿನ್ನೆಲೆ ಹಾವೇರಿಗೆ ವಿಜಯೇಂದ್ರ ಭೇಟಿ ನೀಡಿದರು. ಈ ವೇಳೆ ಹಾವೇರಿ ನಗರದಲ್ಲಿ
ವಿಜಯೇಂದ್ರ ಅವರು ರೋಡ್ ಶೋ ನಡೆಸಿದ್ದಾರೆ.
ಹಾವೇರಿ ನಗರದಲ್ಲಿ ಬಿ.ವೈ ವಿಜಯೇಂದ್ರ ರೋಡ್ ಶೋಗೆ ಮಾಜಿ ಸಚಿವ ಬಿಸಿ ಪಾಟೀಲ್, ಬಿಜೆಪಿ ಜಿಲ್ಲಾದ್ಯಕ್ಷ ಅರುಣ್ ಕುಮಾರ್ ಪೂಜಾರ್ ಸೇರಿದಂತೆ ಹಲವು ಮುಖಂಡರು ವಿಜಯೇಂದ್ರಗೆ ಸಾಥ್ ನೀಡಿದ್ದಾರೆ.
ಬೃಹತ್ ಹೂವಿನ ಹಾರ ಹಾಕಿ ವಿಜಯೇಂದ್ರಗೆ ಕಾರ್ಯಕರ್ತರು ಸ್ವಾಗತ ಕೋರಿದ್ದಾರೆ.