ಬೆಂಗಳೂರು: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಮಂಡಿಸಿದ 2024-25ರ ಮಧ್ಯಂತರ ಆಯವ್ಯಯ ಪತ್ರದಲ್ಲಿ ಕಳೆದ 10 ವರ್ಷಗಳ ಅವಧಿಯಲ್ಲಿ ನರೇಂದ್ರ ಮೋದಿ ಅವರು ನಿರ್ಮಿಸಿರುವ ʻವಿನಾಶಕಾರಿ ಭಾರತʼದ ವಾಸ್ತವವನ್ನು ಬಚ್ಚಿಟ್ಟು ʻವಿಕಸಿತ ಭಾರತʼ ಎಂಬ ಭ್ರಮಾಲೋಕವನ್ನು ದೇಶದ ಜನತೆಗೆ ಮಾರಾಟ ಮಾಡಲು ಪ್ರಯತ್ನಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮಗಳೊಂದಿಗೆ ಸುದ್ದಿಗೋಷ್ಠಿ ನಡೆದಿ ಮಾತನಾಡಿದ ಅವರು, ಬಡವರು, ಮಹಿಳೆಯರು, ಯುವಕರು ಮತ್ತು ರೈತರನ್ನೊಳಗೊಂಡ ನಾಲ್ಕು ‘ಜಾತಿ’ಗಳ ಅಭಿವೃದ್ದಿಯ ಮೇಲೆ ಪ್ರಧಾನಿ ನರೇಂದ್ರ ಮೋದಿಯವರು ನಂಬಿಕೆ ಇಟ್ಟಿದ್ದಾರೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇದನ್ನೆ ʻವಿಕಸಿತ ಭಾರತʼದ ಕನಸು ಎಂದು ಅವರು ಹೇಳಿಕೊಂಡಿದ್ದಾರೆ.
Jalebi with milk: ಬಿಸಿ ಹಾಲಿನ ಜೊತೆ ಜಿಲೇಬಿ ತಿನ್ನುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ..?
ನರೇಂದ್ರ ಮೋದಿಯವರ (Narendra Modi) 10 ವರ್ಷಗಳ ಆಡಳಿತದಲ್ಲಿ ಕಷ್ಟ, ನಷ್ಟ, ದಮನ, ದೌರ್ಜನ್ಯಕ್ಕೀಡಾಗಿರುವುದು ಇದೇ ಬಡವರು, ಮಹಿಳೆಯರು, ಯುವಕರು ಮತ್ತು ರೈತರು. ಈ ಸಮುದಾಯಗಳ ಪಾಲಿಗೆ ಮೋದಿಯವರ 10 ವರ್ಷಗಳ ಆಡಳಿತ ʻವಿಕಸಿತ ಭಾರತʼ ಅಲ್ಲ ಅದು ʻವಿನಾಶಕಾರಿ ಭಾರತʼ ಎಂದು ಕಿಡಿ ಕಾರಿದ್ದಾರೆ.