ಬೆಳಗಾವಿ:- ಸಂಸದ ಡಿಕೆ ಸುರೇಶ್ ಅವರ ಪ್ರತ್ಯೇಕ ರಾಷ್ಟ್ರದ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ವಿಷಯವನ್ನು ಅರ್ಥಮಾಡಿಕೊಳ್ಳಬೇಕಿದೆ. ಅನುದಾನ ಹಂಚಿಕೆಯ ವಿಷಯದಲ್ಲಿ ಬಹಳಷ್ಟು ಏರುಪೇರಾಗುತ್ತಿದೆ, ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುವುದು ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಜವಾಬ್ದಾರಿಯಾಗಿದೆ,
ಎಲ್ಲ ರಾಜ್ಯಗಳನ್ನು ಅವರು ಸಮಾನ ದೃಷ್ಟಿಯಿಂದ ನೋಡಬೇಕು ಎಂದರು. ಬರ ಪರಿಹಾರ ನಿಧಿಗಾಗಿ ಕರ್ನಾಟಕ ಮನವಿ ಸಲ್ಲಿಸಿ ತಿಂಗಳುಗಳು ಕಳೆದರೂ ಇನ್ನೂ ಬಿಡುಗಡೆಯಾಗಿಲ್ಲ. ಮಳೆಗಾಲದಲ್ಲಿ ಪ್ರವಾಹದಂಥ ಸ್ಥಿತಿ ಕರ್ನಾಟಕದಲ್ಲಿ ತಲೆದೋರಿದಾಗಲೂ ಪರಿಹಾರಕ್ಕಾಗಿ ಕೇಂದ್ರದಿಂದ ಹಣ ಬಿಡುಗಡೆಯಾಗಿರಲಿಲ್ಲ ಎಂದು ಹೇಳಿದ ಸಚಿವ, ಎಲ್ಲ ಅಂಶಗಳ ಆಧಾರವಾಗಿಟ್ಟುಕೊಂಡೇ ಸುರೇಶ್ ಆತಂಕ ವ್ಯಕ್ತಪಡಿಸಿದ್ದಾರೆ,
ಮುಂಬರುವ ವರ್ಷಗಳಲ್ಲಿ ಅಂಥದೊಂದು ಕೂಗು ಕೇಳಿ ಬರಬರಬಹುದು ಅನ್ನೋದು ಅವರ ಮಾತಿನ ತಾತ್ಪರ್ಯ ಆಗಿದೆ ಎಂದರು.