ಬೆಂಗಳೂರು:- ವಿಜಯನಗರದಲ್ಲಿ ಹಂಪಿ ಉತ್ಸವದಲ್ಲಿ ಕುಂಕುಮ ಹಾಕಲು ಸಿಎಂ ಸಿದ್ದರಾಮಯ್ಯ ಹಿಂದೇಟು ವಿಚಾರವಾಗಿ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ
ಸಿದ್ದರಾಮಯ್ಯ ಮಾತೆತ್ತಿದರೆ ನಾನು ಹಿಂದೂ ಅಂತಾರೆ. ನಮ್ಮ ತಂದೆ ಹೆಸರಲ್ಲಿ ರಾಮ ಇದೆ ಎಂದು ಹೇಳ್ಳುತ್ತಾರೆ. ಹಾಗಿದ್ದರೆ ಕುಂಕುಮ ಬೇಡ ಅಂತಾ ಯಾಕೆ ಅನ್ನಿಸುತ್ತದೆ ಎಂದು ಕಿಡಿಕಾರಿದ್ದಾರೆ.
ಮಂಗಳಕರವಾದದ್ದು ಯಾವುದೂ ಸಿದ್ದರಾಮಯ್ಯಗೆ ಬೇಡ. ಅವರಿಗೆ ಬೇಕಿರುವುದು ಅಮಂಗಳಕರವಾದದ್ದೆ ಎಂದು ವಾಗ್ದಾಳಿ ಮಾಡಿದ್ದಾರೆ.
ಸಿ.ಟಿ.ರವಿ ಬಗ್ಗೆ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವಾಚ್ಯ ಶಬ್ದದಿಂದ ನಿಂದನೆ ವಿಚಾರವಾಗಿ ಮಾತನಾಡಿದ ಅವರು, ನರೇಂದ್ರಸ್ವಾಮಿರಿಂದ ಕಾಂಗ್ರೆಸ್ ಪಕ್ಷ ಹೇಳಿಸಿದೆ. ನಾನು ರಾಷ್ಟ್ರಧ್ವಜಕ್ಕೆ ಅಗೌರವ ತರುವ ರೀತಿಯಲ್ಲಿ ಮಾತನಾಡಿಲ್ಲ. ತಾಲಿಬಾನ್ ಧ್ವಜ ಹಾಕಿದ್ವಾ, ಹನುಮಧ್ವಜ ಹಾಕಿದ್ದೇವೆ ಎಂದಿದ್ದೆ. ಇದರಲ್ಲಿ ರಾಷ್ಟ್ರ ಧ್ವಜಕ್ಕೆ ಅಪಮಾನ ಆಗುವಂತಹದ್ದು ಎಲ್ಲಿ ಆಗಿದೆ ಎಂದು ಸ್ಪಷ್ಟನೆ ನೀಡಿದರು