ಗದಗ: ಯಶ್ ಬರ್ತಡೇ ವೇಳೆ ಬ್ಯಾನರ್ ಕಟ್ಟುವಾಗ ಅಭಿಮಾನಿಗಳ ಸಾವು ಪ್ರಕರಣ ಹಿನ್ನೆಲೆಯಲ್ಲಿ ಗಾಯಾಳುಗಳಿಗೂ ಆರ್ಥಿಕ ಸಹಾಯ ಮಾಡಿದ ನಟ ಯಶ್
ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಜ.7 ರ ತಡರಾತ್ರಿ ನಡೆದಿದ್ದ ಘಟನೆಯಾಗಿದ್ದು ಜ.8 ರಂದು ಯಶ್ ಬರ್ತಡೇ ಹಿನ್ನೆಲೆ ರಾತ್ರಿ ಕಟೌಟ್ ನಿರ್ಮಿಸುವ ವೇಳೆ ಅವಘಡ ಆಗಿತ್ತು ಕಟೌಟ್ ಗೆ ವಿದ್ಯುತ್ ತಂತಿ ಸ್ಪರ್ಶವಾಗಿ ಸ್ಥಳದಲ್ಲೇ ಮೂವರು ಯುವಕರು ಸಾವನ್ನಪ್ಪಿದ್ರು..ಹನುಂತ ಹರಿಜನ(21) ಮುರಳಿ ನಡುವಿನಮನಿ (20) ನವೀನ್ ಗಾಜಿ (19 ಯುವಕರು ಸಾವು ಘಟನೆಯಲ್ಲಿ ಇನ್ನುಳಿದ ನಾಲ್ಕು ಜನ ಯುವಕರಿಗೆ ಗಂಭೀರ ಗಾಯವಾಗಿತ್ತು..
ಮಂಜುನಾಥ, ಪ್ರಕಾಶ, ಹನುಮಂತ ಹಾಗೂ ನಾಗರಾಜ ಅನ್ನೋರಿಗೆ ಗಂಭೀರ ಗಾಯವಾಗಿತ್ತು ಘಟನೆ ನಡೆದ ದಿನವೇ ಸೂರಣಗಿ ಗ್ರಾಮಕ್ಕೆ ಸ್ವತಃ ನಟ ಯಶ್ ಅವರೇ ಭೇಟಿ ಕೊಟ್ಟಿದ್ದರು ಬಳಿಕ ಜ.17 ರಂದು ಯಶ್ ಆಪ್ತರು ಮೃತ ಯುವಕರ ಕುಟುಂಬಸ್ಥರಿಗೆ ತಲಾ 05 ಲಕ್ಷ ರೂ. ಚೆಕ್ ವಿತರಿಸಿದ್ರು..
ಅದೇ ವೇಳೆ ಗಾಯಾಳುಗಳ ಬ್ಯಾಂಕ್ ಮಾಹಿತಿ ಪಡೆದು ಪರಿಹಾರದ ಭರವಸೆ ನೀಡಿ ಹೋಗಿದ್ರು ಆ ಪ್ರಕಾರ ಗಾಯಾಳುಗಳ ಕುಟುಂಬಕ್ಕೆ ತಲಾ ಒಂದು ಲಕ್ಷ ರೂ.ಜಮಾವಣೆ ಹಾಗೆ ನಾಲ್ಕು ಜನ ಗಾಯಾಳುಗಳ ಕುಟುಂಬಸ್ಥರ ಬ್ಯಾಂಕ್ ಖಾತೆಗೆ ನೇರವಾಗಿ ಒಂದು ಲಕ್ಷ ರೂ.ಜಮೆ..