ಬೆಂಗಳೂರು: ಇನ್ನೇನು ಎಸ್ಎಸ್ಎಲ್ಸಿಯ ಪೂರ್ವ ಸಿದ್ದತೆ ಪರೀಕ್ಷೆ ಶುರುವಾಗುತ್ತದೆ.. ವಿಧ್ಯಾರ್ಥಿಗಳು ಎಲ್ಲಾ ರೀತಿಯಲ್ಲಿ ತಯಾರಿ ನಡೆಸುತ್ತಿದ್ದಾರೆ. ಆದ್ರೆ ಇದಕ್ಕೆ ಇದೀಗ ರಾಜಕೀಯ ತಿರುವು ಪಡೆದು ಸರ್ಕಾರದ ವಿರುದ್ಧ ಹರಿಹಾರುತ್ತಿದ್ದಾರೆ.. ಅದೇನು ಅಂತೀರಾ ಹಾಗಿದ್ರೆ ಈ ಸ್ಟೋರಿ ನೋಡಿ. ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ವಿಚಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಶಿಕ್ಷಣ ಇಲಾಖೆಯ ಮೇಲೆ ಆಕ್ರೋಶ ಹೊರ ಹಾಕುತಿದ್ದಾರೆ.
ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ಪ್ರತಿಯೊಬ್ಬ ವಿದ್ಯಾರ್ಥಿಯಿಂದ 50 ರೂಪಾಯಿ ವಸೂಲಿ ಮಾಡುತ್ತಿದೆ ಎಂದು ಶಿಕ್ಷಣ ಇಲಾಖೆಯ ವಿರುದ್ಧ ಕಿಡಿಕಾದಿದ್ದರು. ರಾಜ್ಯ ಸರ್ಕಾರದ ವಿರುದ್ಧ ಗರಂ ಆಗಿದ್ರು .. ಇದೀಗ ಶಿಕ್ಷಣ ಇಲಾಖೆ ಅದಕ್ಕೆ ಸ್ಪಷ್ಟನೆ ನೀಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಇಲಾಖೆ, ವಿದ್ಯಾರ್ಥಿಗಳಿಂದ ಹಣ ಸಂಗ್ರಹ ಮಾಡುವುದಕ್ಕೆ 2023ರ ಫೆಬ್ರವರಿಯಲ್ಲಿ ಸರ್ಕಾರವೇ ಆದೇಶ ಹೊರಡಿಸಿತ್ತು. ಆ ಆದೇಶವನ್ನು ಪಾಲಿಸುತ್ತಿದ್ದೀವಿ.
ಕಳೆದ 4 ವರ್ಷಗಳಿಂದ ಈ ಶುಲ್ಕ ಇದೆ. ಪರೀಕ್ಷಾ ಖರ್ಚು ಭರಿಸಲು ಈ ಶುಲ್ಕ ವಸೂಲಿ ಮಾಡಲಾಗುತ್ತದೆ ಎಂದು ಹೇಳುವ ಮೂಲಕ ಬಿಜೆಪಿ ಸರ್ಕಾರವಿದ್ದಾಗಲೇ ಈ ರೀತಿಯ ಆದೇಶ ಬಂದಿದೆ ಎಂದು ತಿಳಿಸಿದ್ದಾರೆ. ಒಟ್ಟಾರೆ ಓದುವಂತಹ ವಿದ್ಯಾರ್ಥಿಗಳ ಮೇಲೆ ರಾಜಕೀಯದ ಜಿದ್ದಾಜಿದ್ದಿ ಶುರುವಾಗಿದೆ.ಇದು ವಿದ್ಯಾರ್ಥಿಗಳ ಮೇಲೆ ಯಾವ ರೀತಿ ಪರಿಣಾಮ ಬೀಳುತ್ತದೆ ಎಂದು ಊಹಿಸಲು ಸಾಧ್ಯವಿಲ್ಲ. . ಮುಂದಿನ ದಿನಗಳಲ್ಲಿ ಇದು ಯಾವ ರೀತಿ ತಿರುವು ಪಡೆಯುತ್ತದೆ ಎಂದು ಕಾದು ನೋಡಬೇಕಿದೆ..