ಬೆಂಗಳೂರು: ಶಕ್ತಿ ಯೋಜನೆಯಲ್ಲಿ(Shakti Scheme) ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. 5 ವರ್ಷ ಯೋಜನೆ ಮುಂದುವರೆಯಲಿದೆ. ಮುಂದಿನ ಅವಧಿಯಲ್ಲಿ ಕಾಂಗ್ರೆಸ್ (Congress) ಮತ್ತೆ ಅಧಿಕಾರಕ್ಕೆ ಬರುತ್ತದೆ ಅಗಲೂ ಶಕ್ತಿ ಯೋಜನೆ ಅನುಷ್ಠಾನ ಮಾಡುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ತಿಳಿಸಿದ್ದಾರೆ.
4 ವರ್ಷಗಳಿಂದ ಒಂದು ಬಸ್ ಖರೀದಿ ಮಾಡಿರಲಿಲ್ಲ. ನಾವು ಈಗ ಸುಮಾರು 5 ಸಾವಿರ ಬಸ್ ಗಳು ಖರೀದಿಗೆ ನಿರ್ಧಾರ ಮಾಡುತ್ತಿದ್ದೇವೆ. ಹಿಂದಿನ ಸರ್ಕಾರದಲ್ಲಿ ಖಾಲಿ ಹುದ್ದೆ ನೇಮಕಾತಿ ಆಗಿರಲಿಲ್ಲ. ನಮ್ಮ ಸರ್ಕಾರ 9 ಸಾವಿರ ಹುದ್ದೆ ನೇಮಕಕ್ಕೆ ಸಿಎಂ ಒಪ್ಪಿದ್ದಾರೆ. ಪ್ರಕ್ರಿಯೆ ಶುರುವಾಗಿದೆ. ಆದಷ್ಟು ಬೇಗ 9 ಸಾವಿರ ಹುದ್ದೆ ಭರ್ತಿ ಮಾಡುತ್ತೇವೆ. ಇಲ್ಲಿಯವರಗೆ 146 ಕೋಟಿ ಮಹಿಳೆಯರು ಶಕ್ತಿ ಯೋಜನೆಯಲ್ಲಿ ಓಡಾಡಿದ್ದಾರೆ. ಶಕ್ತಿ ಯೋಜನೆ ಯಶಸ್ವಿಯಾಗಿದೆ. ಬಿಜೆಪಿಗಿಂತ ಉತ್ತಮವಾಗಿ ಇಲಾಖೆ ನಾವು ನಡೆಸಿದ್ದೇವೆ. ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಶಕ್ತಿ ಯೋಜನೆ ಮುಂದೆವರೆಸುತ್ತೇವೆ ಎಂದು ಹೇಳಿದರು.